Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಂಧಿನಗರಕ್ಕೆ ಮತ್ತೆ ಸೆಕ್ಸಿ ತಾರೆ ನಮಿತಾ ಎಂಟ್ರಿ
ಆತ್ಮಹತ್ಯೆಗೆ ಯತ್ನಿಸಿ ಸಾವಿನ ಮನೆ ಕದ ತಟ್ಟಿ ಬಂದಿದ್ದ ನಿರ್ದೇಶಕ ಓಂ ಸಾಯಿ ಪ್ರಕಾಶ್ ಈಗ 'ಶ್ರೀ ನಾಗಶಕ್ತಿ' ಚಿತ್ರವನ್ನ್ನು ಕೈಗೆತ್ತಿಕೊಂಡಿದ್ದಾರೆ. ಚಂದ್ರಿಕಾ ನಿರ್ಮಿಸುತ್ತಿರುವ ಈ ಚಿತ್ರ ರವಿಕಿರಣ್ ಎಸ್ಟೇಟ್ ನಲ್ಲಿ ಇತ್ತೀಚೆಗೆ ಸೆಟ್ಟೇರಿತ್ತು. ಈ ಚಿತ್ರದ ಮುಖ್ಯಪಾತ್ರದಲ್ಲಿ ಶ್ರುತಿ ನಟಿಸುತ್ತಿದ್ದಾರೆ.
ಇದೇ ಹುರುಪಿನಲ್ಲಿ ಓಂ ಸಾಯಿ ಪ್ರಕಾಶ್ ಮತ್ತೊಂದು ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಚಿತ್ರದ ಹೆಸರು 'ಭಗವಾನ್ ಎಂಎಲ್ ಎ'. ಈ ಚಿತ್ರದ ಮೂಲಕ ಸೆಕ್ಸಿ ತಾರೆ ನಮಿತಾ ಮತ್ತೆ ಗಾಂಧಿನಗರಕ್ಕೆ ಅಡಿಯಿಡುತ್ತಿದ್ದಾರೆ. ತೆಲುಗಿನಲ್ಲಿ ಯಶಸ್ವಿ ಪ್ರದರ್ಶನ ಕಂಡ 'ಆಪರೇಷನ್ ದುರ್ಯೋಧನ' ಚಿತ್ರದ ರೀಮೇಕ್ ಇದಾಗಿದೆ.
'ಉಲ್ಲಾಸ ಉತ್ಸಾಹ' ಚಿತ್ರದ ನಿರ್ಮಾಪಕ ಬಿ ಪಿ ತ್ಯಾಗರಾಜು ಅವರು ಸಾಯಿ ಪ್ರಕಾಶ್ ಕೈಗೆ ಎರಡು ಚಿತ್ರಗಳನ್ನು ನಿರ್ದೇಶಿಸಿಕೊಡುವಂತೆ ಆಜ್ಞಾಪಿಸಿದ್ದಾರೆ. ಅವರ ಹಳೆ ಸಾಲ ಚುಕ್ತಾ ಆಗಬೇಕಾದರೆ ಸಾಯಿ ಪ್ರಾಕಾಶ್ ಈ ಚಿತ್ರಗಳನ್ನು ನಿರ್ದೇಶಿಸಲೇಬೇಕು.
ಏತನ್ಮಧ್ಯೆ ಕನ್ನಡ ಚಿತ್ರರಂಗದಲ್ಲಿ ಸಾಯಿ ಪ್ರಕಾಶ್ ಬಗ್ಗೆ ಅನುಕಂಪದ ಅಲೆ ಎದ್ದಿದೆ. ಪುನರ್ಜನ್ಮ ಪಡೆದು ಬಂದು ಆಕ್ಷನ್, ಕಟ್ ಹೇಳುತ್ತಿರುವ ಅವರ 'ಶ್ರೀ ನಾಗಶಕ್ತಿ' ಚಿತ್ರದ ಬಗ್ಗೆ ಇಡೀ ಚಿತ್ರರಂಗ ಬೆನ್ನುತಟ್ಟಿ ಹುರಿದುಂಬಿಸಿದೆ. ಸೋಲೆ ಗೆಲುವಿನ ಸೋಪಾನ ಎಂಬಂತೆ ಸಾಯಿ ಪ್ರಾಕಾಶ್ ಗೆಲುವಿನತ್ತ ದಾಪುಗಾಲು ಹಾಕಿದ್ದಾರೆ.