Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫಲಿಸಿತು ಒಲವಿನ ಪೂಜಾ ಫಲ; ಒಲವೇ ಮಂದಾರ
ಸದಭಿರುಚಿಯ ಚಿತ್ರಗಳನ್ನು ಪ್ರೇಕ್ಷಕ ಕೈಬಿಡಲ್ಲ ಎಂಬುದಕ್ಕೆ ತಾಜಾ ಉದಾಹರಣೆ 'ಒಲವೇ ಮಂದಾರ'. ಈ ಚಿತ್ರ ಅರ್ಧ ಶತಕ ದಾಟಿ ಈಗ 75 ದಿನಗಳನ್ನು ಪೂರೈಸುವುದರಲ್ಲಿದ್ದು ಖಂಡಿತವಾಗಿಯೂ ಶತಕ ಬಾರಿಸಲಿದೆ ಎಂಬ ವಿಶ್ವಾಸದಲ್ಲಿದ್ದಾರೆ ನಿರ್ಮಾಪಕ ಗೋವಿಂದರಾಜು. ಬೆಂಗಳೂರಿನ ತ್ರಿವೇಣಿ ಚಿತ್ರಮಂದಿರದಲ್ಲಿ ದಿನದಿಂದ ದಿನಕ್ಕೆ ಪ್ರೇಕ್ಷಕರ ಸಂಖ್ಯೆ ಹೆಚ್ಚುತ್ತಿರುವುದೇ ಇದಕ್ಕೆ ಸಾಕ್ಷಿ.
ತಮ್ಮ ಚೊಚ್ಚಲ ಚಿತ್ರದಲ್ಲೆ ಗೋವಿಂದರಾಜು ಅವರ ಚಿತ್ರಕ್ಕೆ ಸಿಕ್ಕಾಪಟ್ಟೆ ಯಶಸ್ಸು ಸಿಕ್ಕಿರುವುದು ಚಿತ್ರತಂಡದಲ್ಲಿ ಹೊಸ ಹುರುಪು ಮೂಡಿಸಿದೆ. ಸರಿಸುಮಾರು ರು.3.5 ಕೋಟಿಯಲ್ಲಿ ನಿರ್ಮಿಸಿದ ಚಿತ್ರ ನಿರ್ಮಾಪಕರ ಜೇಬಿಗೂ ಸಾಕಷ್ಟು ಲಾಭವನ್ನೆ ತಂದುಕೊಟ್ಟಿದೆ. ಚಿತ್ರದ ನಿರ್ದೇಶಕ ಜಯತೀರ್ಥ, ಛಾಯಾಗ್ರಾಹಕ ರವಿಕುಮಾರ್ ಸನಾ, ನಟ ಶ್ರೀಕಾಂತ್ ಅವರ ಪ್ರತಿಭೆ ಚಿತ್ರದ ಮೂಲಕ ಹೊರಬಿದ್ದಿದೆ.
ಬೆಂಗಳೂರಿನ ತ್ರಿವೇಣಿ ಚಿತ್ರಮಂದಿರ ಸೇರಿದಂತೆ ರಾಜ್ಯದ 36 ಚಿತ್ರಮಂದಿರಗಳಲ್ಲಿ 'ಒಲವೇ ಮಂದಾರ' ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ರಂಗಭೂಮಿಯಲ್ಲಿ ಪಳಗಿದ ಜಯತೀರ್ಥ ಅವರ ಚೊಚ್ಚಲ ನಿರ್ದೇಶನದ ಚಿತ್ರವಿದು. ನಿರ್ಮಾಪಕರ ಮಗ ಶ್ರೀಕಾಂತ್ ಹಾಗೂ ನಾಯಕಿ ಆಕಾಂಕ್ಷ ಅವರಿಗೆ ಇದು ಚೊಚ್ಚಲ ಚಿತ್ರ. ಈ ಚಿತ್ರದ ಮೂಲಕ ಜಯತೀತೀರ್ಥರು ಪ್ರೀತಿಯ ಹಲವು ಮುಖಗಳನ್ನು ಅನಾವರಣಗೊಳಿಸಿದ್ದಾರೆ. ಚಿತ್ರದಲ್ಲಿ ಸತ್ಯ ಘಟನೆ ಆಧರಿಸಿದ ಎರಡು ದೃಶ್ಯಗಳು ಪ್ರಮುಖ ಆಕರ್ಷಣೆಯಾಗಿ ನಿಲ್ಲುತ್ತವೆ.