Don't Miss!
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಂಕರ್ ನಾಗ್ ಪತ್ನಿಗೆ ರು.21.6 ಲಕ್ಷ ನಷ್ಟಭರ್ತಿ
ಈ ಅಪಘಾತ ಪ್ರಕರಣ ನ್ಯಾಯಾಲಯದ ಮೆಟ್ಟಿಲು ಹತ್ತಿತ್ತು.ಶಂಕರ್ ನಾಗ್ ಅಪಘಾತ ಪ್ರಕರಣವನ್ನು ಕರ್ನಾಟಕ ಉಚ್ಛನ್ಯಾಯಾಲಯದ ವಿಭಾಗೀಯ ಪೀಠ ಇದೀಗ ಇತ್ಯರ್ಥಪಡಿಸಿದೆ. ಶಂಕರ್ ನಾಗ್ ಅವರ ಪತ್ನಿ ಅರುಂಧತಿ ನಾಗ್ ಮತ್ತು ಪುತ್ರಿ ಕಾವ್ಯಾ ಅವರಿಗೆ ರು.21.6 ಲಕ್ಷ ಪರಿಹಾರ ನೀಡುವಂತೆ ಲಾರಿ ಮಾಲೀಕ ಮತ್ತು ವಿಮಾ ಕಂಪನಿಗೆ ಹೈಕೋರ್ಟ್ ಆದೇಶ ನೀಡಿದೆ.
ಈ ಘಟನೆಗೆ ಸಂಬಂಧಿಸಿದಂತೆ ಲಾರಿ ಮಾಲೀಕ ಮತ್ತು ವಿಮಾ ಕಂಪನಿ ವಿರುದ್ಧ ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ (ಎಂಎಸಿಟಿ)ದಲ್ಲಿ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಕರಣ ಅರುಂಧತಿ ನಾಗ್ ಮತ್ತು ಕಾವ್ಯಾ ಅವರಿಗೆ ರು.23 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿತ್ತು.
ಎಂಎಸಿಟಿ ನ್ಯಾಯಾಲಯದ ವಿರುದ್ಧ ಅರುಂಧತಿ ನಾಗ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಧೀಶರಾದ ಶ್ರೀಧರ್ ರಾವ್ ಮತ್ತು ಸತ್ಯನಾರಾಯಣ ಅವರಿದ್ದ ವಿಭಾಗೀಯ ಪೀಠ ಪ್ರಕರಣದ ವಿಚಾರಣೆ ನಡೆಸಿ ರು.21.6 ಲಕ್ಷ ಪರಿಹಾರ ನೀಡುವಂತೆ ಲಾರಿ ಮಾಲೀಕ ಮತ್ತು ವಿಮಾ ಕಂಪನಿಗೆ ಆದೇಶ ನೀಡಿದ್ದಾರೆ.
ಶಂಕರನಾಗ್ ಮೃತಪಡುವ ವೇಳೆಗೆ ರಾಜ್ಯದಲ್ಲಿ ಅವರು ಜನಪ್ರಿಯ ನಟರಾಗಿದ್ದರು. ಅವರಿಗೆ ಹೆಚ್ಚಿನ ಸಂಭಾವನೆ ಸಿಗುತ್ತಿತ್ತು. ರು.23 ಲಕ್ಷ ಪರಿಹಾರ ನಮಗೆ ಸಾಲದು, ರು.1.25 ಕೋಟಿ ಪರಿಹಾರ ಕೊಡಿಸಬೇಕೆಂದು ಅರುಂಧತಿ ನಾಗ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅರುಂಧತಿ ನಾಗ್ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿ ಎಂಎಸಿಟಿ ನ್ಯಾಯಾಲಯ ನೀಡಿದ್ದ ಪರಿಹಾರಕ್ಕಿಂತಲೂ ರು.2 ಲಕ್ಷಕಡಿಮೆ ನೀಡುವಂತೆ ಆದೇಶಿಸಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)