Don't Miss!
- News Lok Sabha Election 2024: ಬೆಂಗಳೂರು ಉತ್ತರದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಶೋಭಾ ಎದುರು ‘ಕೈ’ ಅಸ್ತ್ರ ವರ್ಕೌಟ್ ಆಗುತ್ತಾ?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಳವಿಕಾ ಮೇಡಂ ಸಾರಥ್ಯದಲ್ಲಿ ‘ಜೀ ಕನ್ನಡ’ ಹೆಜ್ಜೆ!
ಬೆಂಗಳೂರು : ಕಿರುತೆರೆ ಮತ್ತು ಬೆಳ್ಳಿತೆರೆ ನಟಿ ಮಾಳವಿಕಾ ಅವಿನಾಶ್ ‘ಜೀ ಕನ್ನಡ’ ಚಾನೆಲ್ನ ಕಾರ್ಯಕ್ರಮ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ.
ಜೀ ಟಿವಿ ಈ ಕುರಿತು ಪ್ರಕಟಣೆ ಹೊರಡಿಸಿದೆ. ಮಾಳವಿಕಾ ಚಾನೆಲ್ಗಾಗಿ ವಿವಿಧ ಅಪರೂಪದ ಕಾರ್ಯಕ್ರಮ ರೂಪಿಸುವ ಜವಾಬ್ದಾರಿ ನಿಭಾಯಿಸಲಿದ್ದಾರೆ. ಅವರು ಸದ್ಯಕ್ಕೆ ‘ಯಾರಿಗುಂಟು ಯಾರಿಗಿಲ್ಲ’ ಎಂಬ ಗೇಮ್ ಶೋವನ್ನು ಜೀ ಕನ್ನಡದಲ್ಲಿ ನಿರೂಪಿಸುತ್ತಿದ್ದಾರೆ.
ಪ್ರೇಮಾ ಕಾರಂತ ನಿರ್ದೇಶನದ ‘ನಕ್ಕಳಾ ರಾಜಕುಮಾರಿ’ ಎಂಬ ಮಕ್ಕಳ ಚಿತ್ರದ ಮೂಲಕ ಬಾಲನಟಿಯಾಗಿ ಬೆಳ್ಳಿತೆರೆ ಪ್ರವೇಶಿಸಿದ ಮಾಳವಿಕಾ, ವಿದ್ಯಾಭ್ಯಾಸ ಮುಂದುವರಿಸಿ ಕಾನೂನು ಪದವಿ ಪಡೆದವರು. ಆನಂತರ ಟಿ.ಎನ್.ಸೀತಾರಾಮ್ ನಿರ್ದೇಶನದ ‘ಮಾಯಾಮೃಗ’, ‘ಮನ್ವಂತರ’ ಮತ್ತು ‘ಮುಕ್ತ’ ಧಾರಾವಾಹಿಗಳ ಮೂಲಕ ಜನಪ್ರಿಯತೆಯ ಉತ್ತುಂಗಕ್ಕೇರಿದವರು.
ತಮಿಳಿನ ಜಯಾ ಚಾನಲ್ನಲ್ಲಿ ಪ್ರಸಾರವಾಗುತ್ತಿದ್ದ, ಕೆ.ಬಾಲಚಂದರ್ ನಿರ್ದೇಶನದ ‘ಅಣ್ಣಿ’ ಧಾರಾವಾಹಿ ಮೂಲಕ ಅವರು ತಮಿಳು ಪ್ರೇಕ್ಷಕರ ಮನವನ್ನೂ ಗೆದ್ದಿದ್ದರು. ಇದಲ್ಲದೆ ಕೆಲವು ಟೀವಿ ಕಾರ್ಯಕ್ರಮಗಳನ್ನೂ ಅವರು ನಡೆಸಿಕೊಟ್ಟಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಇದನ್ನೂ ಓದಿ :
ಪಾಪ ‘ಮಾಧವಿ ಪಟೇಲ್’ಗೆ ಎಷ್ಟೊಂದು ವ್ಯಥೆ!