Don't Miss!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- News Weather Report: ಭೀಕರ ಬಿಸಿಲಿನ ನಡುವೆಯೂ ಏಪ್ರಿಲ್ 3ರವರೆಗೂ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿ ಹೆಜ್ಜೆಯಲ್ಲಿ ಅಮ್ಮ ಲೀಲಾವತಿ
ಬೆಂಗಳೂರು ಮಹಾನಗರ ಪಾಲಿಕೆಯ ಎದುರಿಗಿರುವ ಬಾದಾಮಿ ಹೌಸ್ ನ ಪ್ರಿಯದರ್ಶಿನಿ ಚಿತ್ರಮಂದಿರದಲ್ಲಿ ಜೂನ್ 12ರ ಸಂಜೆ 4.30ಕ್ಕೆ 'ಮುಖಾಮುಖಿ' ಸಂವಾದ ನಡೆಯಲಿದೆ. ವಾರ್ತಾ ಇಲಾಖೆಯ ವತಿಯಿಂದ ಲೀಲಾವತಿ ಅವರ ಕುರಿತು ಕಿರುಚಿತ್ರ ಕೂಡ ಈ ಸಂದರ್ಭದಲ್ಲಿ ಪ್ರಸಾರವಾಗಲಿದೆ. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಟಿಎಸ್ ನಾಗಾಭರಣ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಲೀಲಾವತಿ ಚಿತ್ರಜೀವನ : ಅತ್ಯಂತ ಸಹಜವಾದ ಅಭಿನಯದಿಂದ ಚಿತ್ರಪ್ರೇಮಿಗಳ ಮನಸೆಳೆದಿದ್ದ ಲೀಲಾವತಿ ಅವರ ನಿಜ ನಾಮಧೇಯ ಲೀಲಾ ಕಿರಣ್.
ಅವರು 1949ರಲ್ಲಿ 'ನಾಗಕನ್ನಿಕಾ' ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರು ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ನಾಯಕಿಯಾಗಿ ಅವರು ಅಭಿನಯಿಸಿದ ಪ್ರಥಮ ಚಿತ್ರ 'ಮಾಂಗಲ್ಯ ಯೋಗ.' ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ 'ರಣಧೀರ ಕಂಠೀರವ.'
'ರಾಣಿ ಹೊನ್ನಮ್ಮ' ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯತೆ ಗಳಿಸುತ್ತಾ ಸಾಗಿತು. 70ರ ದಶಕದ ನಂತರ ನಾಯಕಿ ಪಾತ್ರಗಳಿಂದ ಹಿಂದೆ ಸರಿದು ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಮಮತಾಮಯಿ ಅಮ್ಮನಾಗಿ, ಅಜ್ಜಿಯಾಗಿ ನಾನಾಬಗೆಯ ಪಾತ್ರಗಳಲ್ಲಿ ಅನೇಕ ಪಾತ್ರಗಳಿಗೆ ಜೀವ ತುಂಬಿದ್ದಾರೆ.
'ಗೆಜ್ಜೆ ಪೂಜೆ', 'ಸಿಪಾಯಿ ರಾಮು', ಮತ್ತು 'ಡಾಕ್ಟರ್ ಕೃಷ್ಣ' ಚಿತ್ರಗಳಲ್ಲಿನ ಮನೋಜ್ಞ ಅಭಿನಯಕ್ಕಾಗಿ ಲೀಲಾವತಿಯವರು ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸುಮಾರು 300 ಚಿತ್ರಗಳಿಗಿಂತಲೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಲೀಲಾವತಿಯವರು ನಿರ್ಮಾಪಕಿಯಾಗಿಯೂ ಚಿತ್ರರಂಗಕ್ಕೆ ಅನನ್ಯ ಕಾಣಿಕೆ ನೀಡಿದ್ದಾರೆ. ಲೀಲಾವತಿಯವರಿಗೆ 'ಡಾ. ರಾಜ್ ಕುಮಾರ್' ಪ್ರಶಸ್ತಿ ನೀಡುವ ಮೂಲಕ ರಾಜ್ಯ ಸರಕಾರ ಗೌರವಿಸಿದೆ.