Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಜು ವೆಡ್ಸ್ ಗೀತಾ ವೀಕ್ಷಿಸಿದ ನಾರಾಯಣ ಮೂರ್ತಿ ದಂಪತಿ
ರಮ್ಯಾ ಮತ್ತು ಶ್ರೀನಗರ ಕಿಟ್ಟಿ ಮುಖ್ಯಭೂಮಿಕೆಯಲ್ಲಿರುವ 'ಸಂಜು ವೆಡ್ಸ್ ಗೀತಾ' ಚಿತ್ರವನ್ನು ಎನ್ ಆರ್ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ವೀಕ್ಷಿಸಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂತಸವನ್ನು ರಮ್ಯಾ ತನ್ನ ಓದುಗರೊಂದಿಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಪ್ರೇಮಕಥಾ ಹಂದರದ ಈ ಚಿತ್ರದಲ್ಲಿ ಸಂಗೀತ ಪ್ರಮುಖ ಆಕರ್ಷಣೆ. ಶ್ರೀನಗರ ಕಿಟ್ಟಿ ಅವರ ವೃತ್ತಿ ಜೀವನದಲ್ಲಿ ಸಂಜು ವೆಡ್ಸ್ ಗೀತಾ ಚಿತ್ರ ಉತ್ತಮ ಬ್ರೇಕ್ ನೀಡಿದೆ. ಎಲ್ಲಡೆಯಿಂದಲೂ ಚಿತ್ರದ ಬಗ್ಗೆ ಮೆಚ್ಚುಗೆ ಮಾತುಗಳು ವ್ಯಕ್ತವಾಗುತ್ತಿವೆ. ನಾರಾಯಣ ಮೂರ್ತಿ ದಂಪತಿಗಳು ಈ ಚಿತ್ರ ನೋಡಿರುವುದು ರಮ್ಯಾ ಹಾಗೂ ಚಿತ್ರತಂಡದಲ್ಲಿ ಹೊಸ ಹುರುಪಿಗೆ ಕಾರಣವಾಗಿದೆ.
ಮೂಲಗಳ ಪ್ರಕಾರ ಬೆಂಗಳೂರು, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಪ್ರದೇಶದ ವಿತರಣೆ ಹಕ್ಕುಗಳು ರು.1.50 ಕೋಟಿಗೆ ಮಾರಾಟವಾಗಿವೆ. ದರ್ಶನ್ ಅವರ ಪ್ರಿನ್ಸ್ ಹಾಗೂ ಸುದೀಪ್ ಕೆಂಪೇಗೌಡ ಚಿತ್ರಗಳ ಪ್ರಬಲ ಸ್ಪರ್ಧೆಯ ನಡುವೆಯೂ 'ಸಂಜು ವೆಡ್ಸ್ ಗೀತಾ' ಚಿತ್ರ ಮುನ್ನುಗ್ಗುತ್ತಿರುವುದ್ದು, ನಾಗಶೇಖರ್ ನಿರ್ದೇಶನದ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ.