Don't Miss!
- Sports IPL 2024: ಸೋತು ಸುಣ್ಣವಾದರೂ ಪಾರ್ಟಿ ಮಾಡಿದ ಆರ್ಸಿಬಿ ಪ್ಲೇಯರ್ಸ್; ಕೊಹ್ಲಿ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್
- News ನೇಹಾ ಹತ್ಯೆ: ಸಾವಿನ ಮನೆಯಲ್ಲಿ ರಾಜಕಾರಣ ಸರಿಯಲ್ಲ, 90 ದಿನದಲ್ಲಿ ನ್ಯಾಯ ಸಿಗಲಿದೆ: ಸುರ್ಜೇವಾಲ
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಜು ವೆಡ್ಸ್ ಗೀತಾ ವೀಕ್ಷಿಸಿದ ನಾರಾಯಣ ಮೂರ್ತಿ ದಂಪತಿ
ರಮ್ಯಾ ಮತ್ತು ಶ್ರೀನಗರ ಕಿಟ್ಟಿ ಮುಖ್ಯಭೂಮಿಕೆಯಲ್ಲಿರುವ 'ಸಂಜು ವೆಡ್ಸ್ ಗೀತಾ' ಚಿತ್ರವನ್ನು ಎನ್ ಆರ್ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ವೀಕ್ಷಿಸಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂತಸವನ್ನು ರಮ್ಯಾ ತನ್ನ ಓದುಗರೊಂದಿಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಪ್ರೇಮಕಥಾ ಹಂದರದ ಈ ಚಿತ್ರದಲ್ಲಿ ಸಂಗೀತ ಪ್ರಮುಖ ಆಕರ್ಷಣೆ. ಶ್ರೀನಗರ ಕಿಟ್ಟಿ ಅವರ ವೃತ್ತಿ ಜೀವನದಲ್ಲಿ ಸಂಜು ವೆಡ್ಸ್ ಗೀತಾ ಚಿತ್ರ ಉತ್ತಮ ಬ್ರೇಕ್ ನೀಡಿದೆ. ಎಲ್ಲಡೆಯಿಂದಲೂ ಚಿತ್ರದ ಬಗ್ಗೆ ಮೆಚ್ಚುಗೆ ಮಾತುಗಳು ವ್ಯಕ್ತವಾಗುತ್ತಿವೆ. ನಾರಾಯಣ ಮೂರ್ತಿ ದಂಪತಿಗಳು ಈ ಚಿತ್ರ ನೋಡಿರುವುದು ರಮ್ಯಾ ಹಾಗೂ ಚಿತ್ರತಂಡದಲ್ಲಿ ಹೊಸ ಹುರುಪಿಗೆ ಕಾರಣವಾಗಿದೆ.
ಮೂಲಗಳ ಪ್ರಕಾರ ಬೆಂಗಳೂರು, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಪ್ರದೇಶದ ವಿತರಣೆ ಹಕ್ಕುಗಳು ರು.1.50 ಕೋಟಿಗೆ ಮಾರಾಟವಾಗಿವೆ. ದರ್ಶನ್ ಅವರ ಪ್ರಿನ್ಸ್ ಹಾಗೂ ಸುದೀಪ್ ಕೆಂಪೇಗೌಡ ಚಿತ್ರಗಳ ಪ್ರಬಲ ಸ್ಪರ್ಧೆಯ ನಡುವೆಯೂ 'ಸಂಜು ವೆಡ್ಸ್ ಗೀತಾ' ಚಿತ್ರ ಮುನ್ನುಗ್ಗುತ್ತಿರುವುದ್ದು, ನಾಗಶೇಖರ್ ನಿರ್ದೇಶನದ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ.