Don't Miss!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- News Mangalsutra Row: ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಪ್ರಧಾನಿ: ಕಾಂಗ್ರೆಸ್
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾಫಿ ಶಾಪ್' ನಲ್ಲಿ ಗಿರೀಶ್ ಕಾರ್ನಾಡ್
ಬ್ಲೂ ಫಾಕ್ಸ್ ಸಿನಿಮಾ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ಕಾಫಿ ಶಾಪ್' ಚಿತ್ರಕ್ಕೆ ನಗರದ ಪ್ರಸಾದ್ ರೆಕಾರ್ಡಿಂಗ್ ಸ್ಟೂಡಿಯೋದಲ್ಲಿ ಮಾತುಗಳ ಜೋಡಣೆ ನಡೆಯುತ್ತಿದೆ ಎಂದು ನಿರ್ದೇಶಕ ಗೀತಾಕೃಷ್ಣ ತಿಳಿಸಿದ್ದಾರೆ. ಹೈದರಾಬಾದ್ ಸೇರಿದಂತೆ ಹಲವು ಸುಪ್ರಸಿದ್ದ ಸ್ಥಳಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ.
ನಿರ್ದೇಶನದ ಸಾರಥ್ಯ ವಹಿಸಿರುವ ಗೀತಾಕೃಷ್ಣ ಚಿತ್ರದ ನಿರ್ಮಾಪಕರು ಹೌದು. 'ಕಾಫಿ ಶಾಪ್' ಗೆ ಕಥೆ, ಚಿತ್ರಕಥೆ, ಸಂಗೀತ ಹಾಗೂ ಸಂಭಾಷಣೆಯ ಕೊಡುಗೆಯೂ ಇವರದೆ. ಹಿಂದೆ 'ಸಂಕೀರ್ತನ', 'ಕೋಕಿಲಾ', 'ಪ್ರಿಯತಮ ' ಹಾಗೂ 'ಸರ್ವರ್ ಸುಂದರಂಗಾರು' ಮೊದಲಾದ ಚಿತ್ರಗಳನ್ನು ನಿರ್ದೇಶಿಸಿರುವ ಗೀತಾಕೃಷ್ಣ ಅವರು 'ಸಂಕೀರ್ತನ' ಚಿತ್ರಕ್ಕಾಗಿ ಪ್ರತಿಷ್ಠಿತ ನಂದಿ ಪ್ರಶಸ್ತಿ ಪಡೆದವರು.
ಶಶಾಂಕ್ ಹಾಗೂ ಬಿಯಾಂಕ ದೇಸಾಯಿ ನಾಯಕ,ನಾಯಕಿಯರಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್ ಅವರು ಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ. ಚಿತ್ರದ ಛಾಯಾಗ್ರಾಹಕ ಮುರುಳಿ ರಘು. ನ್ಯೂಯಾರ್ಕ್ ಯೂನಿವರ್ಸಿಟಿಯಲ್ಲಿ ತರಬೇತಿ ಪಡೆದಿರುವ ಇವರು ಭಾರತ ಚಿತ್ರರಂಗದಲ್ಲೇ ಪ್ರಥಮ ಬಾರಿಗೆ ರೆಡ್ 1ಕ್ಯಾಮೆರಾವನ್ನು 'ಕಾಫಿ ಶಾಪ್' ಚಿತ್ರಕ್ಕಾಗಿ ಬಳಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)