ರಾಜೇಂದ್ರಸಿಂಗ್ ಬಾಬು ಪ್ರಾಣಾಪಾಯದಿಂದ ಪಾರು

By Rajendra

SV Rajendra Singh Babu
ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಅವರ ಕಾರು ಅಪಘಾತಕ್ಕೀಡಾದ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಸಿಂಗಾಪುರಕ್ಕೆ ಪಯಣಿಸಲು ವೀಸಾ ಮಾಡಿಸುವ ಸಲುವಾಗಿ ತೆರಳುತ್ತಿದ್ದಾಗ ಚಿತ್ರದ ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್‌ಬಾಬು ಅವರ ಕಾರು ಅಪಘಾತಕ್ಕೀಡಾಗಿತ್ತು.

ಸಣ್ಣಪುಟ್ಟ ಗಾಯಗಳಾಗಿ ಈಗ ಚೇತರಿಸಿಕೊಂಡಿರುವ ಸಿಂಗ್ ಬಾಬು ಅವರು ಚಿತ್ರತಂಡದೊಂದಿಗೆ ಸಿಂಗಾಪುರಕ್ಕೆ ಪಯಣ ಬೆಳೆಸಿದ್ದಾರೆ. ಅವರು ಪ್ರಾಣಾಪಾಯದಿಂದ ಬಚಾವಾಗಿರುವುದಾಗಿ ಮೂಲಗಳು ತಿಳಿಸಿವೆ. ರೆಬೆಲ್ ಚಿತ್ರದ ಶೂಟಿಂಗ್‌ಗಾಗಿ ಅವರು ಸಿಂಗಪುರಕ್ಕೆ ಹೊರಟಿದ್ದಾರೆ.

ಮೈಸೂರು ಡ್ರೀಮ್ ಮರ್ಚೆಂಟ್ಸ್ ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ರೆಬಲ್' ಚಿತ್ರದ ಚಿತ್ರೀಕರಣ ನವೆಂಬರ್ 10ರಿಂದ ಸಿಂಗಾಪುರದಲ್ಲಿ ಆರಂಭವಾಗಲಿದೆ. ನಲವತ್ತೆರಡು ಸದಸ್ಯರ ಚಿತ್ರತಂಡ ಸಿಂಗಾಪುರದತ್ತ ಪ್ರಯಾಣ ಬೆಳೆಸಿದೆ. ಅಲ್ಲಿ ಮಾತಿನ ಭಾಗದ ಚಿತ್ರೀಕರಣ ಹಾಗೂ ಎರಡು ಹಾಡುಗಳ ಚಿತ್ರೀಕರಣ ನಡೆಯಲಿದೆ. ನಾಯಕ ಆದಿತ್ಯ ಹಾಗೂ ನಾಯಕಿ ಪ್ರೀತಿ(ಬಾಂಬೆ) ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸುತ್ತಾರೆ.

ನಿರ್ದೇಶಕರೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸೆಲ್ವರಾಜ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜೆಸ್ಸಿಗಿಫ್ಟ್ ಸಂಗೀತ ನೀಡಿದ್ದಾರೆ. ರವಿವರ್ಮ ಹಾಗೂ ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನವಿರುವ ರೆಬಲ್ಗೆ ಎಂ.ಎಸ್.ರಮೇಶ್ ಸಂಭಾಷಣೆ ಬರೆದಿದ್ದಾರೆ. (ಒನ್‌ಇಂಡಿಯಾ ಕನ್ನಡ)

More from Filmibeat

English summary
Kannada films noted director SV Rajendra Singh Babu was injured in a car accident, when he was on the way to get his visa to Singapore for shooting of his upcoming movie Rebel. He has suffered from minor injuries.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X