Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೇಲುಕೋಟೆಯಲ್ಲಿ ‘ಸ್ವರಾಂಜಲಿ’
ಶ್ರೀವಿದ್ಯಾ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ಸ್ವರಾಂಜಲಿ" ಚಿತ್ರದ ಹಾಡೊಂದು ಚೆಲುವ ನಾರಾಯಣನ ಚಂದದೂರಾದ ಮೇಲುಕೋಟೆಯಲ್ಲಿ ಚಿತ್ರೀಕರಣಗೊಂಡಿದೆ. ಶ್ಯಾಂ ಅವರು ರಚಿಸಿರುವ 'ಸುಮಸರಿಗಮ ಹಾಡನ್ನು ಹಾಡಿದೆಯಾ-ಘಮಘಮಘಮ ಗಂಧವ ಸೂಸುವೆಯ್ಯಾ' ಎಂಬ ಗೀತೆ ಈ ಪುರಾಣ ಪ್ರಸಿದ್ಧ ನಗರದಲ್ಲಿ ಚಿತ್ರೀಕರಣಗೊಂಡಿದ್ದು, ನಾಯಕ ನಟ ರಮಣ ಹಾಗೂ ನಾಯಕಿ ರಶ್ಮಿ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.
ಈ ಹಾಡಿನ ಚಿತ್ರೀಕರಣದೊಂದಿಗೆ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ ಎಂದು ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕ ಎಂ.ಎಸ್.ಶ್ರೀನಿವಾಸ್ ತಿಳಿಸಿದ್ದಾರೆ. ನಿರ್ದೇಶಕರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಬಿ.ಎಲ್.ಬಾಬು ಕ್ಯಾಮೆರಾ, ಚಂದ್ರಕಾಂತ್ ಸಂಗೀತ, ಕೌರವ ವೆಂಕಟೇಶ್ ಸಾಹಸ, ಸಂಜೀವ್ರೆಡ್ಡಿ ಸಂಕಲನ, ಸತೀಶ್ ನೃತ್ಯ ಹಾಗೂ ಚೆನ್ನಯ್ಯ ಅವರ ನಿರ್ಮಾಣ ನಿರ್ವಹಣೆಯಿದೆ.
ರಮಣ, ರಶ್ಮಿ, ಸ್ಫೂರ್ತಿ, ಶರತ್ ಲೋಹಿತಾಶ್ವ, ಎಂ.ಎಸ್.ಶ್ರೀನಿವಾಸ್, ಸೂರ್ಯಕಿರಣ್, ರಮೇಶ್ಭಟ್, ಶೋಭ್ರಾಜ್, ಸುಂದರರಾಜ್, ಧರ್ಮ, ಶ್ರೀಧರ್, ಸಿದ್ದರಾಜು ಕಲ್ಮಣ್ಕರ್, ಆನಂದರಾಜು ಮುಂತಾದವರು 'ಸ್ವರಾಂಜಲಿ"ಯ ತಾರಾಬಳಗದಲ್ಲಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)