Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹರಿಕೃಷ್ಣ, ರವಿವರ್ಮ ಹಾಗೂ ಬಾಬು ತ್ರಿವೇಣಿ ಸಂಗಮ
'ಗುಬ್ಬಿ' ರವಿವರ್ಮ ನಿರ್ದೇಶನದ ಹೊಸ ಚಿತ್ರಕ್ಕೆ ಸಂಗೀತ ನಿರ್ದೇಶಕರಾಗಿ ಹರಿಕೃಷ್ಣ ಫೈನಲ್ ಆಗಿದ್ದಾರೆ. ಅಜಯ್ರಾವ್ ನಾಯಕನಾಗಿ ನಟಿಸಲಿರುವ ಹೊಸ ಚಿತ್ರಕ್ಕೆ ಎಸ್.ವಿ.ಬಾಬು ನಿರ್ಮಾಪಕರು. ಈ ಹಿಂದೆ ಇದೇ ರವಿವರ್ಮ ಮತ್ತು ಬಾಬು ತಂಡ 'ಸಂಗಮ' ಸಿನಿಮಾ ಮಾಡಿತ್ತು. ಅದು ಐವತ್ತು ದಿನವನ್ನು ಯಶಸ್ವಿಯಾಗಿ ಪೂರೈಸಿತ್ತು.
ಆದರೆ, ಅದೇ ಚಿತ್ರಕ್ಕೆ ಮ್ಯೂಸಿಕ್ ಮಾಡಿದ್ದ ದೇವಿಶ್ರೀ ಪ್ರಸಾದ್ ಸಂಗೀತ ಅದ್ಯಾಕೋ ಕನ್ನಡಿಗರಿಗೆ ಇಷ್ಟವಾಗಿರಲಿಲ್ಲ. ದೇವಿಶ್ರೀ ತೆಲುಗಲ್ಲಿ ನಂಬರ್ ಒನ್ ಸಂಗೀತ ನಿರ್ದೇಶಕರಾಗಿದ್ದರೂ 'ಆರ್ಯ'ದಂಥ ಹಿಟ್ಟಾನುಹಿಟ್ ಚಿತ್ರಗಳನ್ನು ಕೊಟ್ಟಿದ್ದರೂ ನಮ್ಮಲ್ಲಿನ ಜನ ಅದ್ಯಾಕೋ ಅವರ ಢಂಕಣಕ ಹಾಡುಗಳನ್ನು ಇಷ್ಟಪಡಲಿಲ್ಲ.
ಈ ಬಾರಿ ದೇವಿಶ್ರೀ ಪ್ರಸಾದ್ ಅವರನ್ನು ಕೈ ಬಿಟ್ಟು, ಸದ್ಯದ ಕನ್ನಡದ ನಂಬರ್ ಒನ್ ಸಂಗೀತ ನಿರ್ದೇಶಕ ಹರಿಕೃಷ್ಣ ಅವರ ಜೊತೆ ರವಿವರ್ಮ ಕೈ ಜೋಡಿಸಿದ್ದಾರೆ. ಅಂದಹಾಗೇ ಎಸ್.ವಿ.ಬಾಬು ಅವರು ಶಿವಮಣಿಯವರ 'ಗೋಕಾಕ್' ಸಿನಿಮಾದಿಂದ ಹೊರಬಂದು, ಮತ್ತೆ ರವಿವರ್ಮರಿಗೆ ಆಫರ್ ಕೊಟ್ಟಿದ್ದಾರೆ!ಈ ಬಾರಿಯೂ ಈ ಜೋಡಿ ಗೆಲ್ಲುತ್ತಾ? ಅಜಯ್ರಾವ್ಗೆ ಬ್ರೇಕ್ ಸಿಗುತ್ತಾ ಎನ್ನುವುದು ಮುಂದಿರುವ ಪ್ರಶ್ನೆ...