Don't Miss!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ನವರಸ ನಾಯಕ ಅಧ್ಯಕ್ಷ?
ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ನವರಸ ನಾಯಕ ಜಗ್ಗೇಶ್ ಅವರ ಆಯ್ಕೆ ಬಹುತೇಕ ಖಚಿತವಾಗಿದೆ. ಏಪ್ರಿಲ್ 30ರಂದು ಚುನಾವಣೆ ನಡೆಯಲಿದ್ದು, ಚಿತ್ರರಂಗದ ಘಟಾನು ಘಟಿ ನಿರ್ಮಾಪಕರೆಲ್ಲಾ ಜಗ್ಗೇಶ್ ಬೆನ್ನಿಗಿದ್ದಾರೆ ಎಂಬ ಖಚಿತ ಮಾಹಿತಿ ಗಾಂಧಿನಗರದಿಂದ ಬಂದಿದೆ. ಜಗ್ಗೇಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ಸಾಧ್ಯತೆಗಳು ದಟ್ಟವಾಗಿವೆ ಎಂಬ ಮಾತುಗಳು ಕೇಳಿಬಂದಿವೆ.
ಗೋಲ್ಡನ್ ಗರ್ಲ್ ರಮ್ಯಾ ಅವರ 'ದಂಡಂ ದಶಗುಣಂ' ಘಟನೆ ನಿರ್ಮಾಪಕರ ಸಂಘದಲ್ಲಿ ಬದಲಾವಣೆ ಗಾಳಿ ಬೀಸುವಂತೆ ಮಾಡಿದೆ. ನಟ ಹಾಗೂ ನಿರ್ಮಾಪಕರೊಬ್ಬರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಅತ್ತ ನಿರ್ಮಾಪಕರ ಇತ್ತ ಕಲಾವಿದರ ಸಮಸ್ಯೆಗಳು ಸುಲಭ ಪರಿಹಾರ ಕಾಣುತ್ತವೆ ಎಂಬ ಲೆಕ್ಕಾಚಾರದಲ್ಲಿ ಜಗ್ಗೇಶ್ ಅವರನ್ನು ಆಯ್ಕೆ ಮಾಡಲಾಗುತ್ತಿದೆ.
ಈಗಾಗಲೆ ರಾಜಕೀಯದಲ್ಲೂ ಒಂದಷ್ಟು ಏಳುಬೀಳುಗಳನ್ನು ಕಂಡಿರುವ ಜಗ್ಗೇಶ್ ಅವರಿಗೆ ನಿರ್ಮಾಪಕರ ಸಂಘದ ಅಧ್ಯಕ್ಷ ಪಟ್ಟ ಅಷ್ಟೋನು ಕಷ್ಟವಾಗಲಾರದು. ಕೇವಲ ಬೆರಳೆಣಿಕೆಯಷ್ಟು ಚಿತ್ರಗಳನ್ನು ನಿರ್ಮಿಸಿರುವ ಜಗ್ಗೇಶ್ ಅವರಿಗೆ ಅನುಭವ ಸಾಲದು ಎಂಬ ಮಾತುಗಳು ಕೇಳಿಬಂದಿವೆ. ಆದಾಗ್ಯೂ ಸಂಘದಲ್ಲಿ ಹೊಸಬರಿಗೆ ಮಣೆ ಹಾಕೋಣ ಎಂಬ ಬದಲಾವಣೆಯ ಪರ್ವ ಶುರುವಾಗಿದೆ.