Don't Miss!
- Lifestyle ದುಬೈ ಪ್ರವಾಹದ ವೈರಲ್ ವೀಡಿಯೋಗಳು: ಒಂದೊಂದು ದೃಶ್ಯವೂ ಬದುಕಿನ ಪಾಠ ಹೇಳುತ್ತೆ
- News ರಾಜ್ಯದಲ್ಲಿ ಮೊದಲ ಬಾರಿಗೆ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕನಿಗೆ ₹1 ಲಕ್ಷ ಪರಿಹಾರ-ಯಾವ ಜಿಲ್ಲೆಯಲ್ಲಿ?
- Finance Binance: ಫೈನ್ ಕಟ್ಟಿ ಭಾರತಕ್ಕೆ ಮರಳಿ ಬರಲಿದೆ ಕ್ರಿಫ್ಟೋಕರೆನ್ಸಿ ವಿನಿಮಯ ಕೇಂದ್ರ!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ರಂಜಿತಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ನಿಜ
ಸ್ವಾಮಿ ನಿತ್ಯಾನಂದ ಲೈಂಗಿಕ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ನಟಿ ರಂಜಿತಾ ಆತ್ಮಹತ್ಯೆಗೆ ಯತ್ನಿಸಿದ್ದು ನಿಜ ಎಂಬ ಸುದ್ದಿ ಇದೀಗ ಬೆಳಕಿಗೆ ಬಂದಿದೆ. ಕಳೆದ ಕೆಲದಿನಗಳ ಹಿಂದೆ ರಂಜಿತಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ನಿಜ ಎಂದು ಆಕೆಯ ಗೆಳೆತಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ.
ಸ್ವಾಮಿ ನಿತ್ಯಾನಂದ ಲೈಂಗಿಕ ಪ್ರಕರಣ ಬಯಲಾಗುತ್ತಿದ್ದಂತೆ ಪ್ರಮುಖವಾಗಿ ಕೇಳಿಬಂದ ಹೆಸರು ರಂಜಿತಾ. ಮಾಧ್ಯಮಗಳಲ್ಲಿ ಈಕೆಯ ಹೆಸರು ಇನ್ನಿಲ್ಲದಂತೆ ಪ್ರಚಾರಕ್ಕೆ ಬಂತು. ಮನನೊಂದ ರಂಜಿತಾ ಕಡೆಗೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ರಂಜಿತಾಳನ್ನು ಆಕೆಯ ಗೆಳತಿ ರಕ್ಷಿಸಿದ್ದಾಗಿ ತಿಳಿಸಿದ್ದಾಳೆ. ಆದರೆ ರಂಜಿತಾಳ ಗೆಳತಿ ತನ್ನ ಹೆಸರನ್ನು ಬಹಿರಂಗಪಡಿಸಿಲ್ಲ.
ರಂಜಿತಾ ಮೂಲತಃ ಆಂಧ್ರಪ್ರದೇಶದವರು. ಆಕೆಯ ಮಾತೃಭಾಷೆ ತೆಲುಗು. ತೆಲುಗಿನ ಬಹಳಷ್ಟು ಚಿತ್ರಗಳಲ್ಲಿ ರಂಜಿತಾ ನಟಿಸಿದ್ದಾರೆ. ತಮಿಳು ಚಿತ್ರದ ಮೂಲಕ ಆಕೆ ಬೆಳ್ಳಿತೆರೆಗೆ ಅಡಿಯಿಟ್ಟಿದ್ದರು. ಸೈನಿಕಾಧಿಕಾರಿಯನ್ನು ಮದುವೆಯಾಗಿ ನಂತರದ ದಿನಗಳಲ್ಲಿ ಅವರಿಬ್ಬರ ದಾಂಪತ್ಯ ಮುರಿದು ಬಿದ್ದಿತ್ತು.
ಚೈನ್ನೈ ನಗರದ ಸಾಲಿಗ್ರಾಮಂ ಮತ್ತು ಟಿ ನಗರದಲ್ಲಿ ರಂಜಿತಾರ ತಲಾ ಒಂದೊಂದು ಬಂಗಲೆಗಳಿವೆ. ಆದರೆ ಆಕೆ ಟಿ ನಗರದ ಬಂಗಲೆಯಲ್ಲಿ ವಾಸವಾಗಿದ್ದರು. ಸ್ವಾಮಿ ನಿತ್ಯಾನಂದ ಪ್ರಕರಣ ಬಯಲಾಗುತ್ತಿದ್ದಂತೆ ಇದೀಗ ಆ ಬಂಗಲೆಗೆ ಬೀಗ ಜಡಿಯಲಾಗಿದೆ. ಬಂಗಲೆಗೆ ಇಬ್ಬರು ಪೊಲೀಸರ ಕಾವಲನ್ನು ಹಾಕಲಾಗಿದೆ. ಸದ್ಯಕ್ಕೆ ರಂಜಿತಾ ತಲೆಮರೆಸಿಕೊಂಡಿದ್ದಾರೆ.