Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಕ್ಕೆ ಖಳನಟನಾಗಿ ಸಲ್ಮಾನ್ ಖಾನ್ ತಮ್ಮ ಅರ್ಬಾಜ್
ಕನ್ನಡದಲ್ಲಿ ಭಾರಿ ಬಜೆಟ್ ಚಿತ್ರಗಳನ್ನು ನಿರ್ಮಿಸುವುದು ಬಲು ಅಪರೂಪ. ಅಂತಹದ ಒಂದು ಅಪರೂಪದ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ ದಿನೇಶ್ ಗಾಂಧಿ. ಚಿತ್ರದ ಹೆಸರು ಛತ್ರಪತಿ. ಎಸ್.ಎಸ್.ಕಂಬೈನ್ಸ್ ಲಾಂಛನದಲ್ಲಿ ದಿನೇಶ್ಗಾಂಧಿ ನಿರ್ಮಿಸುತ್ತಿರುವ ನಾಲ್ಕನೇ ಚಿತ್ರವಿದು.
ಈ ಚಿತ್ರಕ್ಕೆ ಖಳನಾಯಕನಾಗಿ ಸಲ್ಮಾನ್ ಖಾನ್ ತಮ್ಮ ಅರ್ಬಾಜ್ ಖಾನ್ ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಖ್ಯಾತ ನಟಿ ಭಾನುಪ್ರಿಯ ಕೂಡ ಚಿತ್ರದ ತಾರಾಗಣದಲ್ಲಿದ್ದಾರೆ. ಸಿದ್ದಾಂತ್(ಎ.ಕೆ.56) ನಾಯಕರಾಗಿ ಅಭಿನಯಿಸುತ್ತಿರುವ ಈ ಚಿತ್ರ ಅಪಾರ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ನಾಯಕಿಯ ಆಯ್ಕೆ ನಡೆಯುತ್ತಿದೆ.
ಸದ್ಯಕ್ಕೆ 'ಛತ್ರಪತಿ'ಗೆ ಕೇರಳದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಕಣ್ಣೂರಿನ ಕಡಲತೀರದಲ್ಲಿ ಐನೂರು ಮನೆಗಳ ಅದ್ದೂರಿ ಸೆಟ್ ನಿರ್ಮಿಸಲಾಗಿದೆ. ಈ ಸೆಟ್ ನಿರ್ಮಾಣಕ್ಕೆ ಸುಮಾರು ಎರಡು ಕೋಟಿ ಖರ್ಚಾಗಿರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಚಿತ್ರದ ಮೂರು ಸಾಹಸ ಸನ್ನಿವೇಶಗಳು 3ಡಿ ಎಫೆಕ್ಟ್ನಲ್ಲಿ ಮೂಡಿ ಬರಲಿದೆ.
ಚಿತ್ರದ ನಿರ್ದೇಶಕರೂ ಆಗಿರುವ ದಿನೇಶ್ಗಾಂಧಿ ಎ.ಆರ್.ಬಾಬು ಅವರೊಟ್ಟಿಗೆ ಸಂಭಾಷಣೆಯನ್ನೂ ಬರೆದಿದ್ದಾರೆ. ಎಂ.ಎಂ.ಕೀರವಾಣಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ದಾಸರಿಸೀನು ಛಾಯಾಗ್ರಹಣವಿದೆ. ಎಸ್.ಮನೋಹರ್ ಸಂಕಲನ, ಇಸ್ಮಾಯಿಲ್ ಕಲಾ ನಿರ್ದೇಶನ ಹಾಗೂ ಪ್ರದೀಪ್ ಅಂಥೋನಿ ನೃತ್ಯ ನಿರ್ದೇಶನ 'ಛತ್ರಪತಿ' ಚಿತ್ರಕ್ಕಿದೆ. (ದಟ್ಸ್ಕನ್ನಡ ಸಿನಿವಾರ್ತೆ)