Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಬ್ಸಿಡಿ ವಿವಾದ: ಶಿವರಾಂ, ಸುರೇಶ್ ವಿರುದ್ಧ ಎಫ್ಐಆರ್
ಪ್ರತಿ ವರ್ಷ ರಾಜ್ಯ ಸರ್ಕಾರ 50 ಚಿತ್ರಗಳಿಗೆ 10 ರಿಂದ 25 ಲಕ್ಷ ರೂಪಾಯಿ ಸಬ್ಸಿಡಿ ಒದಗಿಸುತ್ತದೆ. 2009-10ನೇ ಸಾಲಿನಲ್ಲಿ ಸಹಾಯಧನಕ್ಕಾಗಿ (ಸಬ್ಸಿಡಿ) ಚಿತ್ರಗಳ ಆಯ್ಕೆ ಮಾಡಲು ರಾಜ್ಯ ಸರ್ಕಾರ ರಚಿಸಿದ ಸಮಿತಿಗೆ ಶಿವರಾಂ ಅಧ್ಯಕ್ಷ ಹಾಗೂ ಮಂಗಳೂರಿನ ಸುರೇಶ್ ಸದಸ್ಯರಾಗಿದ್ದರು.
ಚಿತ್ರವೊಂದಕ್ಕೆ ಸಹಾಯಧನ ಪಡೆಯಲು 2.5 ಲಕ್ಷ ರೂ ಲಂಚ ನೀಡುವಂತೆ ಇಬ್ಬರು ಕೇಳಿದ್ದರು ಎಂಬುದು ಸುವರ್ಣ ವಾಹಿನಿ ಚುಟಕು ಕಾರ್ಯಚರಣೆಯಿಂದ ಸಾಬೀತಾಗಿತ್ತು. ಈ ಬಗ್ಗೆ ಚಿತ್ರ ನಿರ್ದೇಶಕ ಕೂಡ್ಲು ರಾಮಕೃಷ್ಣ ಅವರು ದೂರು ನೀಡಿದ್ದರು.
ಸಿಎಂ ಭರವಸೆ: ಕಳೆದ ಸಾಲಿನಲ್ಲಿ ಸಬ್ಸಿಡಿ ಹಣ ಪಡೆಯಲು 50ಕ್ಕೂ ಹೆಚ್ಚು ಮಂದಿ ಚಿತ್ರ ನಿರ್ಮಾಪಕರು ಸಮಿತಿಗೆ ಲಂಚ ನೀಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ಈ ಹಿನ್ನೆಲೆಯಲ್ಲಿ ಸಹಾಯಧನಕ್ಕೆ ಅರ್ಹವಾಗಿರುವ ಚಿತ್ರಗಳನ್ನು ಪಟ್ಟಿಯಿಂದ ಕೈಬಿಡುವಂತೆ ಅನೇಕ ನಿರ್ಮಾಪಕರು ಆಗ್ರಹಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ, ಅಪರಾಧಿಗಳಿಗೆ ಶಿಕ್ಷೆ ಆಗುವಂತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸದಾನಂದ ಗೌಡ ಹೇಳಿದ್ದಾರೆ.
ಹಿರಿಯ ನಟ ಶಿವರಾಂ ಅವರು ರಾಜಕುಮಾರ್ ಪ್ರಶಸ್ತಿಗೆ ಅರ್ಹರಾಗಿದ್ದರೂ ಹಗರಣದಲ್ಲಿ ಹೆಸರು ಸಿಕ್ಕಿಹಾಕಿಕೊಂಡಿದೆ. ಅವರಿಗೆ ಈಗ ಈ ರಾಜ್ಯ ಪ್ರಶಸ್ತಿ ನೀಡುವುದು ಸರಿಯಲ್ಲ ಎಂದು ನಿರ್ಮಾಪಕ ಉಮೇಶ್ ಬಣಕಾರ್, ಕೂಡ್ಲು ರಾಮಕೃಷ್ಣ ಆಗ್ರಹಿಸಿದ್ದಾರೆ.