Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುಮಕೂರಿನಲ್ಲಿ ಹುಲಿ ಆರ್ಭಟ
ಕಳೆದ ವಾರ ಅದ್ದೂರಿ ಮುಹೂರ್ತ ಸಮಾರಂಭದೊಂದಿಗೆ ಆರಂಭವಾದ 'ಹುಲಿ ಚಿತ್ರದ ಚಿತ್ರೀಕರಣ ಈಗ ತುಮಕೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಆ ನಗರದಲ್ಲೊಬ್ಬ ಪ್ರತಿಷ್ಠಿತ ವ್ಯಕ್ತಿ. ಆತನಿಗೊಬ್ಬ ತಮ್ಮ. ತಮ್ಮನಿಗೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಹಂಬಲ. ಈತನ ಸ್ಪರ್ಧೆಗೆ ಅಡ್ಡ ಬರುವ ಪೊಲೀಸ್ ಅಧಿಕಾರಿ. ಈ ವಿಷಯ ತಿಳಿದು ಆವೇಶಗೊಂಡ ಸ್ಪರ್ಧಾಕಾಂಕ್ಷಿಯ ಕಡೆಯವರಿಂದ ಅಧಿಕಾರಿಯ ಮೇಲೆ ಹಲ್ಲೆಗೆ ಯತ್ನ. ತನ್ನ ಮೇಲೆ ಹಲ್ಲೆ ನಡೆಸಲು ಮುಂದಾದವರ ಮೇಲೆ ಅಧಿಕಾರಿಯಿಂದ ತಕ್ಕ ಶಾಸ್ತಿ.
ಈ ಸನ್ನಿವೇಶವನ್ನು 'ಹುಲಿ ಚಿತ್ರಕ್ಕಾಗಿ ನಿರ್ದೇಶಕ ಓಂಪ್ರಕಾಶ್ರಾವ್ ತುಮಕೂರಿನಲ್ಲಿ ಚಿತ್ರೀಕರಿಸಿಕೊಂಡರು. ಪ್ರತಿಷ್ಠಿತ ವ್ಯಕ್ತಿ ಪಾತ್ರದಲ್ಲಿ ಶೋಭ್ರಾಜ್. ಅವರ ತಮ್ಮನಾಗಿ ಪ್ರೇಮ್, ಪೊಲೀಸ್ ಅಧಿಕಾರಿಯಾಗಿ ಕಿಶೋರ್ ಅಭಿನಯಿಸಿದ ಈ ದೃಶ್ಯದಲ್ಲಿ ಆದಿಲೋಕೇಶ್, ನಟರಾಜ್ ಹಾಗೂ ಸಹಕಲಾವಿದರು ಭಾಗವಹಿಸಿದ್ದರು.ಶಿವು ಎಂಟರ್ ಪ್ರೈಸಸ್ ಲಾಂಛನದಲ್ಲಿ ಬಿ.ಎಸ್.ಸುಧೀಂದ್ರ ಹಾಗೂ ಶಿವಪ್ರಕಾಶ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಮನೋಹರ್ ಅವರ ಛಾಯಾಗ್ರಹಣವಿದೆ.
ಈ ಚಿತ್ರಕ್ಕೆ ಎಂ.ಎಸ್.ರಮೇಶ್ ಸಂಭಾಷಣೆ ಬರೆದಿದ್ದಾರೆ. ಅಭಿಮಾನ್ರಾಯ್ ಸಂಗೀತ, ಡೆನ್ನಿಸಾ ಪ್ರಕಾಶ್ ಕಥೆ, ಡಿ.ಮನೋಹರ್ ಚಿತ್ರಕಥೆ, ಪಳನಿರಾಜ್ ಸಾಹಸ ಹಾಗೂ ಇಸ್ಮಾಯಿಲ್ ಕಲಾ ನಿರ್ದೇಶನವಿರುವ ಚಿತ್ರದ ತಾರಾಬಳಗದಲ್ಲಿ ಕಿಶೋರ್, ಜನ್ನಿಫರ್, ಸ್ವಸ್ತಿಕ್ಶಂಕರ್, ಆದಿಲೋಕೇಶ್, ಪ್ರೇಮ್, ಶೋಭ್ರಾಜ್, ಶ್ರೀನಿವಾಸಮೂರ್ತಿ, ಅವಿನಾಶ್, ಮಾಳವಿಕಾ, ಸುಮಿತ್ರಾ, ಚಿತ್ರಾಶೆಣೈ ಮುಂತಾದವರಿದ್ದಾರೆ.