Don't Miss!
- News ಲೋಕಸಭಾ ಚುನಾವಣೆ: ಮತದಾನದ ದಿನ Rapidoದಿಂದ ಉಚಿತ ಸೇವೆ, ಯಾರಿಗೆ ಲಭ್ಯ..?
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಪ್ತಸ್ವರಗಳಲ್ಲಿ ಮಿಡಿಯಲಿದೆ 'ಕಾಲ್ಗೆಜ್ಜೆ'
ಜೀವನದಲ್ಲಿ ಗೆದ್ದರೆ ಪ್ರೀತಿ ತಾನಾಗಿಯೇ ಹುಡುಕಿಕೊಂಡು ಬರುತ್ತದೆ. ಇದು 'ಕಾಲ್ಗೆಜ್ಜೆ' ಚಿತ್ರದ ಥೀಮ್. ಎಸ್. ಬಂಗಾರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ಅಂತಿಮ ಹಂತದ ಚಿತ್ರೀಕರಣ ಕಳೆದ 4 ರಿಂದ ಪ್ರಾರಂಭವಾಗಿದೆ. ಬಾಕಿ ಉಳಿದ ಎರಡು ಹಾಡುಗಳು ಹಾಗೂ ಮಾತಿನ ಭಾಗದ ಚಿತ್ರೀಕರಣವನ್ನು ಬೆಂಗಳೂರು ಸುತ್ತಮುತ್ತ ಸುಮಾರು 12 ದಿನಗಳ ಕಾಲ ನಡೆಸಲಾಗುವುದು.
ಸುಂದರ ಪ್ರೇಮಕಥೆಯೊಂದನ್ನು ಸಂಗೀತದ ಸಪ್ತ ಸ್ವರಗಳ ಮೂಲಕ ಹೇಳ ಹೊರಟಿದ್ದಾರೆ, ನಿರ್ದೇಶಕ ಎಸ್. ಬಂಗಾರು. ಉದ್ಯಮಿ ನಾಗಭೂಷಣ್ ಬಹಳ ಇಷ್ಟಪಟ್ಟು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಈಗಾಗಲೇ ಕುಂದಾಪುರ, ಮೇಲುಕೋಟೆ, ಬಾಬಾಬುಡನ್ಗಿರಿ ಬೆಟ್ಟ, ಭದ್ರಾವತಿ, ಕೆಮ್ಮಣ್ಣುಗುಂಡಿ, ಮೊದಲಾದ ಕಡೆಗಳಲ್ಲಿ ಯಶಸ್ವಿಯಾಗಿ ಚಿತ್ರೀಕರಣ ನಡೆಸಲಾಗಿದೆ. ಚಿತ್ರೀಕರಣದ ಜೊತೆಗೆ ಸಂಕಲನ ಕಾರ್ಯವೂ ಯಶಸ್ವಿಯಾಗಿ ಸಾಗುತ್ತಿದೆ.
ಗಂಧರ್ವರ ಸಾಹಿತ್ಯ ಹಾಗೂ ಸಂಗೀತ ಸಂಯೋಜನೆ, ವೀನಸ್ ಮೂರ್ತಿಯವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈ ಚಿತ್ರದ ನಾಯಕಿಯಾಗಿ ರೂಪಿಣಿ, ನಾಯಕನಾಗಿ ವಿಶ್ವಾಸ್ ಅಭಿನಯಿಸುತ್ತಿದ್ದು, ರಂಗಾಯಣರಘು, ಪವಿತ್ರ ಲೋಕೇಶ್, ತಬಲ ನಾಣಿ, ಶರಣ್ ಅಲ್ಲದೇ, ಸಂಗೀತ ನಿರ್ದೇಶಕ ವಿ. ಮನೋಹರ್ ಹಾಗೂ ನಿರ್ದೇಶಕ ಎಸ್. ಮಹೇಂದರ್ ಅತಿಥಿ ಪಾತ್ರ ನಿರ್ವಹಿಸಿದ್ದಾರೆ.