Don't Miss!
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಲ್ ಕೆ ಆಡ್ವಾಣಿ ಆಶೀರ್ವಾದಗಳೊಂದಿಗೆ ಜೋಗಯ್ಯ
ಚಿತ್ರ ನಿರ್ದೇಶಕ ಪ್ರೇಮ್ ಗಿಮಿಕ್ ಮಾಡುತ್ತಾರೋ ಇಲ್ಲವೋ ಗೊತ್ತಿಲ್ಲ. ಒಟ್ನಲ್ಲಿ ಕನ್ನಡ ಚಿತ್ರರಂಗದಲ್ಲಿ ಮ್ಯಾಜಿಕ್ ಅಂತೂ ಮಾಡುತ್ತಿದ್ದಾರೆ. ಅವರ ಮಹತ್ವಾಕಾಂಕ್ಷಿ ಚಿತ್ರ 'ಜೋಗಯ್ಯ' ಚಿತ್ರದ ಬಗ್ಗೆ ದಿನಕ್ಕೊಂದು ಸುದ್ದಿಗಳು ಹೊರಬೀಳುತ್ತಿವೆ. ಈ ಚಿತ್ರ ಜುಲೈ 12ರಂದು ಸೆಟ್ಟೇರಲಿದ್ದು ಮುಹೂರ್ತ ಕಾರ್ಯಕ್ರಮಕ್ಕೆ ಮಾಜಿ ಉಪ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಆಡ್ವಾಣಿ ಆಗಮಿಸಲಿದ್ದಾರೆ ಎನ್ನುತ್ತವೆ ಮೂಲಗಳು.
ಜುಲೈ 12ರಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬ. 'ಜೋಗಯ್ಯ' ಚಿತ್ರದ ಮೂಲಕ ಶಿವಣ್ಣ ಸೆಂಚುರಿ ಬಾರಿಸಲಿದ್ದಾರೆ. ಹಾಗಾಗಿ ಈ ಚಿತ್ರದ ಬಗ್ಗೆ ಕನ್ನಡ ಚಿತ್ರೋದ್ಯಮದ ನಿರೀಕ್ಷೆಗಳು , ಪ್ರೇಕ್ಷಕರ ಕಾತುರಗಳು ಗರಿಗೆದರಿವೆ. ಸಹಜವಾಗಿಯೇ 'ಜೋಗಯ್ಯ'ನ ಬಗ್ಗೆ ಕುತೂಹಲ ಮನೆ ಮಾಡಿದೆ.
ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಚಿತ್ರದ ಮುಹೂರ್ತ ನಡೆಯಲಿದೆ. ಮುಹೂರ್ತದ ಆಹ್ವಾನ ಪತ್ರಿಕೆಯನ್ನು ಪ್ರೇಮ್ ತುಂಬ ಜಾಣ್ಮೆಯಿಂದ ರೂಪಿಸಿದ್ದಾರೆ. ಆಡ್ವಾಣಿ ಅವರ ಆಶೀರ್ವಾದಗಳೊಂದಿಗೆ ಎಂದು ಪ್ರಕಟಿಸುವ ಮೂಲಕ ಕುತೂಹಲವನ್ನು ಪ್ರೇಮ್ ಕಾದಿರಿಸಿದ್ದಾರೆ. ಪ್ರೇಮ್ ಗಿಮಿಕ್, ಮ್ಯಾಜಿಕ್ ಏನಾಗುತ್ತದೋ ಕಾದು ನೋಡಬೇಕು.
ಆಹ್ವಾನಿತರ ಪಟ್ಟಿಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಮೆಗಾ ಸ್ಟಾರ್ ಚಿರಂಜೀವಿ, ಗಜಿನಿ ಖ್ಯಾತಿಯ ಸೂರ್ಯ, ಸಂಸದ ಅನಂತಕುಮಾರ್, ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್, ರೆಬಲ್ ಸ್ಟಾರ್ ಅಂಬರೀಷ್, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸಾರಿಗೆ ಸಚಿವ ಆರ್ ಅಶೋಕ್... ಪಟ್ಟಿ ಮುಂದುವರಿಯುತ್ತದೆ.
ಮಾಹಿತಿ ಸಚಿವ ಕಟ್ಟಾ ಸುಬ್ರಹ್ಮಣ್ಯನಾಯ್ಡು, ಬಾಲಚಂದ್ರ ಜಾರಕಿಹೊಳಿ, ಅಶೋಕ್ ಖೇಣಿ, ವಿ ಸೋಮಣ್ಣ, ಬಸಂತಕುಮಾರ್ ಪಾಟೀಲ್, ರಾಘವೇಂದ್ರ ರಾಜ್ ಕುಮಾರ್, ವಿ ರವಿಚಂದ್ರನ್, ಪುನೀತ್ ರಾಜ್ ಕುಮಾರ್, ದರ್ಶನ್, ಸುದೀಪ್, ಜಗ್ಗ್ಗೇಶ್, ಗಣೇಶ್, ದುನಿಯಾ ವಿಜಯ್ ಸಹ ಆಗಮಿಸಲಿದ್ದಾರೆ ಎನ್ನುತ್ತದೆ ಆಹ್ವಾನ ಪತ್ರಿಕೆ.