Don't Miss!
- News ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಕಾಂಗ್ರೆಸ್ ಬೆಂಬಲ: ಬಸವರಾಜ ಬೊಮ್ಮಾಯಿ ಕಿಡಿ
- Automobiles Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಮಾನತೆಯ ಸಾರುವ ‘ವಿಸ್ಮಯ ಪ್ರಣಯ’
ಲೋಕದಲ್ಲಿ ಹೆಣ್ಣಿಗಿಂತ ಗಂಡಿಗೆ ಸ್ವಾತಂತ್ರ್ಯ ಹೆಚ್ಚು ಎಂಬ ಮಾತು ರೂಢಿಯಲ್ಲಿದೆ. ಆದರೆ ಹೆಣ್ಣು ಗಂಡಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ ಎಂದು ಸಾರುತ್ತಾನೆ ಚಿತ್ರದ ಕಥಾನಾಯಕ. ನಾಯಕನಿಗೆ ಅರುಣೋದಯ ಸಮಯಕ್ಕೆ ಎದ್ದು ಕಾಫಿ ಕುಡಿಯುವ ಅಭ್ಯಾಸ. ಎದ್ದ ಕೂಡಲೇ ಅಡುಗೆ ಮನೆಗೆ ಆಗಮಿಸಿದ ಆ ಮನೆಯ ಅಳಿಯ ಕಾಫಿ ಮಾಡಿಕೊಳ್ಳಲು ಮುಂದಾದಾಗ ಅಲ್ಲಿಗೆ ಆಗಮಿಸಿದ ಅತ್ತೆ 'ನೀವು ಏಕೆ ಕಾಫಿ ಮಾಡಿಕೊಳ್ಳುತ್ತಿದ್ದೀರಾ ನನ್ನ ಮಗಳು ಬಂದು ಮಾಡಿಕೊಡುತ್ತಾಳೆ ಬಿಡಿ ಎನ್ನುತ್ತಾರೆ.
ಮುಂದುವರಿದು ಇದು ಅವಳ ಧರ್ಮಅಂದಾಗ ಇದೆಲ್ಲಾ ಹೆಂಡತಿನೇ ಮಾಡಿಬೇಕೆಂದು ಏನಿಲ್ಲ. ನನ್ನ ದೃಷ್ಟಿಯಲ್ಲಿ ಗಂಡು-ಹೆಣ್ಣು ಇಬ್ಬರು ಸಮಾನರು ಎಂದು ಅತ್ತೆಯ ಮುಂದೆ ಅಳಿಯ ಹೇಳುವ ಸನ್ನಿವೇಶವನ್ನು 'ವಿಸ್ಮಯ ಪ್ರಣಯ"ಚಿತ್ರಕ್ಕಾಗಿ ನಿರ್ದೇಶಕ ಮೋಹನ್ ಮಲ್ಲಪಳ್ಳಿ ನಂಜನಗೂಡಿನ ಖಾಸಗಿ ನಿವಾಸವೊಂದರಲ್ಲಿ ಚಿತ್ರೀಕರಿಸಿಕೊಂಡರು. ಹೇಮಾಚೌಧರಿ ಹಾಗೂ ನಾಯಕ ರಾಜ್ಸಾಗರ್ ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ರಾಜ್ಸಾಗರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ವಿಸ್ಮಯ ಪ್ರಣಯ" ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ರಾಜ್ಸಾಗರ್ ಚಿತ್ರಕ್ಕೆ ಕಥೆ ಬರೆದಿರುವುದಲ್ಲದೆ, ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಮೋಹನ್ ಮಲ್ಲಪಳ್ಳಿ ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನ, ಕೆ.ವಿಶ್ವನಾಥ್ ಸಂಗೀತ, ಮ್ಯಾಥ್ಯೂರಾಜನ್ ಛಾಯಾಗ್ರಹಣ, ಗಿರೀಶ್ಕುಮಾರ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ ಹಾಗೂ ಬಿ.ಕೃಷ್ಣ ಅವರ ನಿರ್ಮಾಣ ನಿರ್ವಹಣೆ 'ವಿಸ್ಮಯ ಪ್ರಣಯ' ಚಿತದ ತಾರಾಬಳಗದಲ್ಲಿ ರಾಜ್ಸಾಗರ್, ಮಯೂರಿ, ಕಾವ್ಯಶ್ರೀ, ಹೇಮಾಚೌಧರಿ, ಇಂದ್ರನ್, ರಾಮಿರೆಡ್ಡಿ, ಅಪೂರ್ವ, ಕರಿಬಸವಯ್ಯ, ರೇಖಾದಾಸ್, ಮಿಮಿಕ್ರಿ ರಾಜ್ಗೋಪಾಲ್ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)