Don't Miss!
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಿಂಚಿನ ಓಟ' ಜೊತೆಗೆ ಮತ್ತೆರಡು ಈ ವಾರ ತೆರೆಗೆ
ಕಳೆದ ಶುಕ್ರವಾರ ( ಜು.4) ಕನ್ನಡದ ಯಾವೊಂದು ಚಿತ್ರವೂ ಬಿಡುಗಡೆಯಾಗಲಿಲ್ಲ. ಚಿತ್ರಮಂದಿರಗಳು ಖಾಲಿ ಖಾಲಿ. ಆದರೆ ಈ ವಾರ ಮಾತ್ರ ಮೂರು ಚಿತ್ರಗಳು ಬಿಡುಗಡೆಯಾಗುತ್ತಿವೆ. ಅದರಲ್ಲೂ 'ಮಿಂಚಿನ ಓಟ' ಚಿತ್ರವಂತೂ ಮುಂಚಿತವಾಗಿಯೇ ಬಿಡುಗಡೆಯಾಗುತ್ತಿದ್ದರೆ, 'ಸಿಟಿಜನ್' ಮತ್ತು 'ಅಪಹರಣ'ಗಳು ಶುಕ್ರವಾರ ತೆರೆಕಾಣಲಿವೆ.
'ಮಿಂಚಿನ ಓಟ' ಚಿತ್ರಕ್ಕೆ ಸೆನ್ಸಾರ್ ಮಂಡಳಿ U ಪ್ರಮಾಣ ಪತ್ರ ಕೊಟ್ಟಿದೆ. ಈ ಕಾರಣಕ್ಕೆ ಸಾ.ರಾ.ಗೋವಿಂದು ಹಾಗೂ ನಿರ್ದೇಶಕ ಎ.ಎಂ.ಆರ್. ರಮೇಶ್ ಖುಷಿಯಾಗಿದ್ದಾರೆ. ನಿರ್ದೇಶಕ ರಮೇಶ್ ಈ ಹಿಂದೆ 'ಸೈನೈಡ್' ಚಿತ್ರವನ್ನು ನಿರ್ದೇಶಿಸಿದ್ದರು. ಸಹೋದರರಾದ ವಿಜಯ ರಾಘವೇಂದ್ರ ಹಾಗೂ ಶ್ರೀಮುರಳಿ, ಲಕ್ಷ್ಮಿ ರೈ ಒಟ್ಟಿಗೆ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮೈನವಿರೇಳಿಸುವ ಸಾಹಸ ದೃಶ್ಯಗಳು ಚಿತ್ರದ ಪ್ರಧಾನ ಆಕರ್ಷಣೆ ಎನ್ನುತ್ತಾರೆ ರಮೇಶ್.
ಸಾಯಿಪ್ರಕಾಶ್ ನಿರ್ದೇಶನದ 'ಸಿಟಿಜನ್' ಚಿತ್ರವೂ ಸಾಕಷ್ಟು ಸುದ್ದಿ ಮಾಡಿತ್ತು. ಕನ್ನಡ ಮತ್ತು ತೆಲುಗು ಎರಡು ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಬಹಳ ದಿನಗಳ ನಂತರ ಪೊಲೀಸ್ ಗೆಟಪ್ಪಿನಲ್ಲಿ ಸಾಯಿಕುಮಾರ್ ಕಾಣಿಸುತ್ತಿರುವುದು ಮತ್ತೊಂದು ವಿಶೇಷ. ಬಳ್ಳಾರಿಯಲ್ಲಿ ಹೆಲಿಕಾಪ್ಟರ್ ಬಳಸಿ ಚಿತ್ರಿಸಿರುವ ಕ್ಲೈಮ್ಯಾಕ್ಸ್ ದೃಶ್ಯ ಚಿತ್ರ ರಸಿಕರನ್ನು ಕುರ್ಚಿಗೆ ಅಂಟಿಕೊಳ್ಳುವಂತೆ ಮಾಡುತ್ತದೆ ಎನ್ನುತ್ತಾರೆ ನಿರ್ದೇಶಕರು.
ಬಿ.ಆರ್.ಕೇಶವ ನಿರ್ದೇಶಿಸಿ ಮೊಬೈಲ್ ಕುಮಾರ್ ನಿರ್ಮಿಸಿರುವ 'ಅಪಹರಣ' ಚಿತ್ರ ಈ ವಾರ ಬಿಡುಗಡೆಯಾಗುತ್ತಿರುವ ಮತ್ತೊಂದು ಚಿತ್ರ. ಹೆಸರೇ ಹೇಳುವಂತೆ ಇದೊಂದು ಅಪಹರಣಕ್ಕೆ ಸಂಬಂಧಿಸಿದ ಚಿತ್ರಕಥೆಯನ್ನು ಹೊಂದಿದೆ. 'ಭಗತ್ ಸಿಂಗ್' ಎಂಬ ನಾಟಕವನ್ನು ನಿಲ್ಲಿಸುವ ಉದ್ದೇಶದಿಂದ ಅಪಹರಣ ನಡೆಯುತ್ತದೆ. ಆ ಮೂಲಕ ರಂಗಭೂಮಿ ನಟಿಯೊಬ್ಬಳನ್ನು ಅಪಹರಿಸಲಾಗುತ್ತದೆ. ಬಹಳ ದಿನಗಳ ನಂತರ ಥ್ರಿಲ್ಲರ್ ಮಂಜು ಅವರ ದರ್ಶನ ಭಾಗ್ಯ ಕನ್ನಡಿಗರಿಗೆ ಸಿಗಲಿದೆ.
(ದಟ್ಸ್ಕನ್ನಡ ಸಿನಿವಾರ್ತೆ)