Don't Miss!
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಶವಂತಪುರ ಹೊಸ ಕಾರ್ಪೊರೇಟರ್ ಮುನಿರತ್ನ
ಕನ್ನಡ ಚಿತ್ರರಂಗದ ನಿರ್ಮಾಪಕ ಮುನಿರತ್ನ ನಾಯ್ಡು ಈ ಬಾರಿಯ ಬಿಬಿಎಂಪಿ ಚುನಾವಣೆಯಲ್ಲಿ ಗೆದ್ದಂತಹ ಕನ್ನಡ ಚಿತ್ರರಂಗದ ಏಕೈಕ ವೀರ ಎನ್ನಬಹುದು. ಕಾಂಗ್ರೆಸ್ ಪಕ್ಷದಿಂದ ಯಶವಂತಪುರ ವಾರ್ಡ್ ನಲ್ಲಿ (ವಾರ್ಡ್ ನಂ.37) ಸ್ಪರ್ಧಿಸಿದ್ದ ಮುನಿರತ್ನ ನಾಯ್ಡು ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಆಂಟಿ ಪ್ರೀತ್ಸೆ, ಕಂಬಾಲಹಳ್ಳಿ, ರಕ್ತ ಕಣ್ಣೀರು, ಅನಾಥರು ಚಿತ್ರಗಳನ್ನು ಮುನಿರತ್ನ ನಾಯ್ಡು ನಿರ್ಮಿಸಿದ್ದಾರೆ. ಮುನಿರತ್ನ ನಾಯ್ಡು ಒಟ್ಟು 7434 ಮತಗಳನ್ನು ಗಳಿಸುವ ಮೂಲಕ ಜಯಭೇರಿ ಬಾರಿಸಿದ್ದಾರೆ. ಅವರ ಸಮೀಪ ಸ್ಪರ್ಧಿ ಬಿಜೆಪಿಯ ಬಿಕೆ ವೆಂಕಟೇಶ್ ಅವರು ಒಟ್ಟು 5034 ಮತಗಳನ್ನು ಪಡೆದಿದ್ದರೆ ಜೆಡಿಎಸ್ ನ ಬಿ ಆರ್ ಮಂಜುನಾಥ್ 3030 ಮತಗಳನ್ನು ಪಡೆದಿದ್ದಾರೆ.
ಕಿರುತೆರೆ ನಿರ್ದೇಶಕ, ರಂಗಭೂಮಿ ಕಲಾವಿದ ಹಾಗೂ 'Stumble" ಇಂಗ್ಲಿಷ್ ಚಿತ್ರದ ನಿರ್ದೇಶಕ ಪ್ರಕಾಶ್ ಬೆಳವಾಡಿ ಲೋಕ್ ಸತ್ತಾ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದಾರೆ. 'ಶಿವಾನಿ' ಕನ್ನಡ ಚಿತ್ರದ ನಿರ್ದೇಶಕ ನೆ ಲ ರವಿಶಂಕರ್ (ಶಾಸಕ ನೆ ಲ ನರೇಂದ್ರಬಾಬು ಅವರ ಸಹೋದರ) ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದಾರೆ. ಮತ್ತೊಬ್ಬ ನಿರ್ದೇಶಕ ತೇಶಿ ವೆಂಕಟೇಶ್ ಸಹ ಜೆಡಿಎಸ್ ನಿಂದ ಸ್ಪರ್ಧಿಸಿ ಸೋತಿದ್ದಾರೆ.