Don't Miss!
- News
Breaking; ಹಾಲಿ ಶಾಸಕನಿಗೆ ಟಿಕೆಟ್ ನೀಡದಂತೆ ಎಚ್ಡಿಕೆಗೆ ಮನವಿ!
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Sports
ಜಿಂಬಾಬ್ವೆ vs ವೆಸ್ಟ್ ಇಂಡೀಸ್: ಮೊದಲ ಟೆಸ್ಟ್ 2ನೇ ದಿನ: Live score
- Lifestyle
ತಿಂದ ಆಹಾರ ಸರಿಯಾಗಿ ಜೀರ್ಣವಾಗ್ತಿಲ್ವಾ ಹಾಗಾದ್ರೆ ಈ ಆಸನಗಳನ್ನ ಮಾಡಿ
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Finance
LIC Jeevan Umang: ದಿನಕ್ಕೆ 150 ರೂ ಹೂಡಿಕೆ ಮಾಡಿ, 10 ಲಕ್ಷ ಪಡೆಯಿರಿ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನಗಿಸಲು ಬರುತ್ತಿದ್ದಾನೆ ನಂಜನಗೂಡು ನಂಜುಂಡ
ಈಕೆ ಈಗಾಗಲೇ 2 ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದಾಳೆ. ರಕ್ಷಕ ಚಿತ್ರಕ್ಕೆ ಸಂಗೀತ ನೀಡಿದ್ದ ರವಿಚಂದ್ರ ಈ ಚಿತ್ರದ 6 ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಗಿರಿ ಎಸ್. ನಾರಾಯಣ್ ಜೊತೆ ಕೆಲಸ ಮಾಡಿದ್ದ ಸುರೇಶ್ ಈ ಚಿತ್ರದ ಮೂಲಕ ಸ್ವತಂತ್ರ ಛಾಯಾಗ್ರಾಹಕರಾಗಿದ್ದಾರೆ. ಫರ್ನಿಚರ್ ಉದ್ಯಮ ನಡೆಸುತ್ತಿರುವ ಸುಭಾಷ್ ಕೂರ್ಗ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ನಿರ್ದೇಶಕರು ಒಂದು ಮಲಯಾಳಂ ಕಥೆಯನ್ನು ಕನ್ನಡದಲ್ಲಿ ಮಾಡಬೇಕೆಂದು ನನ್ನ ಬಳಿ ಬಂದಾಗ ನನಗೂ ಕಥೆ ಇಷ್ಟವಾಯಿತು. ಈ ರೀತಿಯ ಸಿನಿಮಾಗಳನ್ನು ಕನ್ನಡಿಗರು ಸ್ವೀಕರಿಸುತ್ತಾರೆಂಬ ನಂಬಿಕೆ ನನಗಿದೆ ಎಂದು ಸುಭಾಷ್ ಹೇಳಿದರು.
1989ರಲ್ಲಿ ತೆರೆಗೆ ಬಂದ ಒಡಕ್ಕು ನೋಕ್ಕಿ ಯಂದಿರಮ್ (ಒಡಕು ದೋಣಿ ಯಂತ್ರ) ಎಂಬ ಮಲಯಾಳಂ ಸಿನಿಮಾ ಕಥೆಯನ್ನು ನಮ್ಮ ನೇಟಿವಿಟಿಗೆ ಹಾಗೂ ಈಗಿನ ಕಾಲಮಾನಕ್ಕೆ ತಕ್ಕಂತೆ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡು ಚಿತ್ರಕಥೆ ಮಾಡುತ್ತೇನೆ. ಮಾನಸಿಕ ಅಸ್ವಸ್ಥತೆ ಹತ್ತರಲ್ಲಿ ಏಳು ಜನರಿಗೆ ಕಾಣಿಸುವ ತೊಂದರೆ. ಆದರೆ, ಅದು ಇತಿಮಿತಿ ಮೀರಿದಾಗ ನಮ್ಮ ಸುತ್ತಮುತ್ತಲಿನವರಿಗೆ ಹೇಗೆ ತೊಂದರೆಯಾಗುತ್ತದೆ ಎಂಬುದನ್ನು ಈ ಚಿತ್ರದಲ್ಲಿ ಹಾಸ್ಯಮಿಶ್ರಿತವಾಗಿ ಹೇಳುತ್ತಿದ್ದೇನೆ ಎನ್ನುತ್ತಾರೆ ನಿರ್ದೇಶಕರು.
ಮೂಲ ಚಿತ್ರದಲ್ಲಿ ಕಮರ್ಷಿಯಲ್ ಅಂಶಗಳಿದ್ದಿಲ್ಲ, ನಮ್ಮ ಚಿತ್ರಕ್ಕೆ ಮನರಂಜನೆಗೆ ಬೇಕಾದ ಹಲವಾರು ಅಂಶಗಳನ್ನು ಅಳವಡಿಸಿಕೊಂಡು ಸೈಕಾಲಜಿ ಜೊತೆಗೆ ಹಾಸ್ಯವನ್ನು ಸೂಕ್ಷ್ಮವಾಗಿ ತೆಗೆದುಕೊಂಡು ಹೋಗಿದ್ದೇನೆ. ತನ್ನ ಹೆಂಡತಿ ಸುಂದರವಾಗಿರುವುದನ್ನೇ ಅನುಮಾನಿಸುವ ನಾಯಕ ಆಕೆಯನ್ನು ಯಾರಾದರೂ ನೋಡಿದರೆ, ಮಾತನಾಡಿಸಿದರೆ, ಅನುಮಾನಪಡುತ್ತಾನೆ. ಆ ಅನುಮಾನ ಅತಿರೇಕಕ್ಕೆ ಹೋಗಿ ನೋಡುಗರಿಗೆ ಹೇಗೆ ಹಾಸ್ಯವಾಗುತ್ತದೆ ಎನ್ನುವುದೇ ಈ ಚಿತ್ರದ ಕಥೆ ಎಂದು ನಿರ್ದೇಶಕ ಶ್ರೀನಿವಾಸ ಪ್ರಸಾದ್ ಹೇಳಿದರು.
ನಂಜನಗೂಡು, ಶ್ರೀರಂಗಪಟ್ಟಣ ಸುತ್ತಮುತ್ತ ಮಾತಿನ ಭಾಗದ ಚಿತ್ರೀಕರಣ ನಡೆಸಿ, ಕೂರ್ಗ್ನಲ್ಲಿ 2ಹಾಡು, ಸ್ಟುಡಿಯೋದಲ್ಲಿ ಸೆಟ್ ಹಾಕಿ 2ಹಾಡು, ನಂಜನಗೂಡಿನಲ್ಲಿ 2ಹಾಡುಗಳನ್ನು ಚಿತ್ರೀಕರಿಸಲಾಗುವುದು. ಪೋಷಕ ಪಾತ್ರದಲ್ಲಿ ಅಭಿನಯಿಸುತ್ತಿರುವ ಕೆ.ಎಸ್.ಎಲ್. ಸ್ವಾಮಿ ಮಾತನಾಡಿ, ನಾನು 50 ವರ್ಷಗಳಿಂದ ಎಲ್ಲಾ ರೀತಿಯ ಪಾತ್ರಗಳನ್ನು ಮಾಡಿದ್ದೇನೆ. ಮೂಲತಃ ನನಗೆ ಕಾಮಿಡಿ ಇಷ್ಟ. ಹಾಗೆ ಸುಮ್ಮನೆ, ಜಂಬೂಸವಾರಿಯಲ್ಲಿ ಹಾಸ್ಯ ಪಾತ್ರಗಳನ್ನು ಮಾಡಿದ್ದೇನೆ ಎಂದರು.
ನಾಯಕ ರವಿಶಂಕರ್ ಮಾತನಾಡಿ ಪಯಣದ ನಂತರ ಒಂದು ಉತ್ತಮ ಪಾತ್ರಕ್ಕಾಗಿ ಬಹಳ ಕಾದೆ. ಈ ಕಥೆ ನನಗೆ ಬಹಳ ಇಷ್ಟವಾಯಿತು. ನಾನು ಇಷ್ಟಪಟ್ಟಂತಹ ಪಾತ್ರ ಈ ಚಿತ್ರದಲ್ಲಿ ಸಿಕ್ಕಿದೆ. ಕ್ಯಾಮೆರಾ ಮುಂದೆ ನಗಿಸುವುದು ಕಷ್ಟದ ಕೆಲಸ. ಕಾಮಿಡಿ ಮಾಡುವವರೆಲ್ಲಾ ಕಾಮಿಡಿಯನ್ ಅಲ್ಲ. ಅದು ವ್ಯಕ್ತಿತ್ವದಿಂದಲೇ ಬರಬೇಕು ಎಂದರು. ಹಾಸ್ಯನಟ ನಾಗರಾಜ್ ಕೋಟೆ ಕೂಡ ಪ್ರಮುಖ ಹಾಸ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)