Just In
Don't Miss!
- News
ಶಿವಮೊಗ್ಗ-ಬೆಂಗಳೂರು ರೈಲು ಪ್ರಯಾಣಿಕರಿಗೆ ಶುಭ ಸುದ್ದಿ
- Sports
ಶ್ರೀಲಂಕಾದಿಂದಲೇ ಟೀಮ್ ಇಂಡಿಯಾಗೆ ಎಚ್ಚರಿಕೆ ರವಾನಿಸಿದ ಜೋ ರೂಟ್
- Finance
"ಟಿಕ್ ಟಾಕ್ ಸೇರಿ ಚೀನಾದ ಕೆಲವು ಆಪ್ ಗಳಿಗೆ ಭಾರತದಲ್ಲಿ ಶಾಶ್ವತ ನಿಷೇಧ"
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಖಾಕಿ ಖದರ್ನಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ
ಕರ್ನಾಟಕದ ವರ್ಣರಂಜಿತ ರಾಜಕಾರಣಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕಲರ್ ಫುಲ್ ಇನ್ನಿಂಗ್ಸ್ ಇಂದು ಗುರುವಾರ(ಸೆ.8) ಆರಂಭವಾಯಿತು. ಖಾಕಿ ಖದರ್ನಲ್ಲಿ ಅವರು ಇಂದು ಮೈಸೂರು ರಸ್ತೆಗಿಳಿದಿದ್ದರು. ಇದೇನಿದು ಅಬಕಾರಿ ಸಚಿವರ ಹೊಸ ವೇಷ ಎಂದು ನೋಡುತ್ತಿದ್ದವರು ಕೊಂಚ ಗಲಿಬಿಲಿಗೊಂಡರು.
ಆದರೆ ಅವರ ಗಲಿಬಿಲಿ, ಗೊಂದಲ ಕೊಂಚ ಸಮಯದಲ್ಲೇ ನಿವಾರಣೆಯಾಯಿತು. ಮಾಸ್ ನಿರ್ದೇಶಕ ಓಂ ಪ್ರಕಾಶ್ ರಾವ್ ಆಕ್ಷನ್ ಕಟ್ ಹೇಳುತ್ತಿರುವ 'ಭೀಮಾ ತೀರದಲ್ಲಿ' ಶೂಟಿಂಗ್ ಇದು ಎಂದು ಗೊತ್ತಾಗಲು ಜಾಸ್ತಿ ಸಮಯ ಹಿಡಿಸಲಿಲ್ಲ.
ಚಿತ್ರದಲ್ಲಿ ಅವರು ಪೊಲೀಸ್ ಡಿಜಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಒಂದು ದಿನದ ಚಿತ್ರೀಕರಣಕ್ಕಾಗಿ ಅವರು ಇಂದು ಬಣ್ಣ ಹಚ್ಚಿಕೊಂಡಿದ್ದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಪ್ರೈಮರಿ ಸ್ಕೂಲ್ನಿಂದಲೂ ನಾನು ನಾಟಕಗಳನ್ನು ಆಡುತ್ತಿದೆ. ಬಣ್ಣದ ಜಗತ್ತಿನ ನಂಟು ತಮ್ಮನ್ನು ಇಲ್ಲಿಯವರೆಗೂ ಕರೆತಂದಿದೆ ಎಂದರು.
ಅಣಜಿ ನಾಗರಾಜ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ದುನಿಯಾ ವಿಜಯ್ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಭೀಮಾ ತೀರದಲ್ಲಿ ರಕ್ತದ ಹೊಳೆಯನ್ನೇ ಹರಿಸಿದ ಚಂದಪ್ಪ ಹರಿಜನ ಜೀವನ ಕಥೆಯನ್ನಾಧರಿಸಿದ ಚಿತ್ರವಿದು. ಪ್ರಣೀತಾ ಹಾಗೂ ಪ್ರಜ್ವಲ್ ಪೂವಯ್ಯ ಚಿತ್ರದ ಇಬ್ಬರು ನಾಯಕಿಯರು. (ದಟ್ಸ್ಕನ್ನಡ ಸಿನಿವಾರ್ತೆ)