Don't Miss!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Finance BMRCL: ಇಂದು ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿ ವಿಸ್ತರಣೆ, ಸಮಯ ವಿವರ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖಾಕಿ ಖದರ್ನಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ
ಕರ್ನಾಟಕದ ವರ್ಣರಂಜಿತ ರಾಜಕಾರಣಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕಲರ್ ಫುಲ್ ಇನ್ನಿಂಗ್ಸ್ ಇಂದು ಗುರುವಾರ(ಸೆ.8) ಆರಂಭವಾಯಿತು. ಖಾಕಿ ಖದರ್ನಲ್ಲಿ ಅವರು ಇಂದು ಮೈಸೂರು ರಸ್ತೆಗಿಳಿದಿದ್ದರು. ಇದೇನಿದು ಅಬಕಾರಿ ಸಚಿವರ ಹೊಸ ವೇಷ ಎಂದು ನೋಡುತ್ತಿದ್ದವರು ಕೊಂಚ ಗಲಿಬಿಲಿಗೊಂಡರು.
ಆದರೆ ಅವರ ಗಲಿಬಿಲಿ, ಗೊಂದಲ ಕೊಂಚ ಸಮಯದಲ್ಲೇ ನಿವಾರಣೆಯಾಯಿತು. ಮಾಸ್ ನಿರ್ದೇಶಕ ಓಂ ಪ್ರಕಾಶ್ ರಾವ್ ಆಕ್ಷನ್ ಕಟ್ ಹೇಳುತ್ತಿರುವ 'ಭೀಮಾ ತೀರದಲ್ಲಿ' ಶೂಟಿಂಗ್ ಇದು ಎಂದು ಗೊತ್ತಾಗಲು ಜಾಸ್ತಿ ಸಮಯ ಹಿಡಿಸಲಿಲ್ಲ.
ಚಿತ್ರದಲ್ಲಿ ಅವರು ಪೊಲೀಸ್ ಡಿಜಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಒಂದು ದಿನದ ಚಿತ್ರೀಕರಣಕ್ಕಾಗಿ ಅವರು ಇಂದು ಬಣ್ಣ ಹಚ್ಚಿಕೊಂಡಿದ್ದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಪ್ರೈಮರಿ ಸ್ಕೂಲ್ನಿಂದಲೂ ನಾನು ನಾಟಕಗಳನ್ನು ಆಡುತ್ತಿದೆ. ಬಣ್ಣದ ಜಗತ್ತಿನ ನಂಟು ತಮ್ಮನ್ನು ಇಲ್ಲಿಯವರೆಗೂ ಕರೆತಂದಿದೆ ಎಂದರು.
ಅಣಜಿ ನಾಗರಾಜ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ದುನಿಯಾ ವಿಜಯ್ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಭೀಮಾ ತೀರದಲ್ಲಿ ರಕ್ತದ ಹೊಳೆಯನ್ನೇ ಹರಿಸಿದ ಚಂದಪ್ಪ ಹರಿಜನ ಜೀವನ ಕಥೆಯನ್ನಾಧರಿಸಿದ ಚಿತ್ರವಿದು. ಪ್ರಣೀತಾ ಹಾಗೂ ಪ್ರಜ್ವಲ್ ಪೂವಯ್ಯ ಚಿತ್ರದ ಇಬ್ಬರು ನಾಯಕಿಯರು. (ದಟ್ಸ್ಕನ್ನಡ ಸಿನಿವಾರ್ತೆ)