Don't Miss!
- Sports DC vs SRH: ಟ್ರಾವಿಸ್ ಹೆಡ್, ಅಭಿಷೇಕ್ ದಾಖಲೆಯ ಜೊತೆಯಾಟ: ಡೆಲ್ಲಿ ಗೆಲುವಿಗೆ ಬೃಹತ್ ಗುರಿ
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖಾಕಿ ಖದರ್ನಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ
ಕರ್ನಾಟಕದ ವರ್ಣರಂಜಿತ ರಾಜಕಾರಣಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕಲರ್ ಫುಲ್ ಇನ್ನಿಂಗ್ಸ್ ಇಂದು ಗುರುವಾರ(ಸೆ.8) ಆರಂಭವಾಯಿತು. ಖಾಕಿ ಖದರ್ನಲ್ಲಿ ಅವರು ಇಂದು ಮೈಸೂರು ರಸ್ತೆಗಿಳಿದಿದ್ದರು. ಇದೇನಿದು ಅಬಕಾರಿ ಸಚಿವರ ಹೊಸ ವೇಷ ಎಂದು ನೋಡುತ್ತಿದ್ದವರು ಕೊಂಚ ಗಲಿಬಿಲಿಗೊಂಡರು.
ಆದರೆ ಅವರ ಗಲಿಬಿಲಿ, ಗೊಂದಲ ಕೊಂಚ ಸಮಯದಲ್ಲೇ ನಿವಾರಣೆಯಾಯಿತು. ಮಾಸ್ ನಿರ್ದೇಶಕ ಓಂ ಪ್ರಕಾಶ್ ರಾವ್ ಆಕ್ಷನ್ ಕಟ್ ಹೇಳುತ್ತಿರುವ 'ಭೀಮಾ ತೀರದಲ್ಲಿ' ಶೂಟಿಂಗ್ ಇದು ಎಂದು ಗೊತ್ತಾಗಲು ಜಾಸ್ತಿ ಸಮಯ ಹಿಡಿಸಲಿಲ್ಲ.
ಚಿತ್ರದಲ್ಲಿ ಅವರು ಪೊಲೀಸ್ ಡಿಜಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಒಂದು ದಿನದ ಚಿತ್ರೀಕರಣಕ್ಕಾಗಿ ಅವರು ಇಂದು ಬಣ್ಣ ಹಚ್ಚಿಕೊಂಡಿದ್ದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಪ್ರೈಮರಿ ಸ್ಕೂಲ್ನಿಂದಲೂ ನಾನು ನಾಟಕಗಳನ್ನು ಆಡುತ್ತಿದೆ. ಬಣ್ಣದ ಜಗತ್ತಿನ ನಂಟು ತಮ್ಮನ್ನು ಇಲ್ಲಿಯವರೆಗೂ ಕರೆತಂದಿದೆ ಎಂದರು.
ಅಣಜಿ ನಾಗರಾಜ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ದುನಿಯಾ ವಿಜಯ್ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಭೀಮಾ ತೀರದಲ್ಲಿ ರಕ್ತದ ಹೊಳೆಯನ್ನೇ ಹರಿಸಿದ ಚಂದಪ್ಪ ಹರಿಜನ ಜೀವನ ಕಥೆಯನ್ನಾಧರಿಸಿದ ಚಿತ್ರವಿದು. ಪ್ರಣೀತಾ ಹಾಗೂ ಪ್ರಜ್ವಲ್ ಪೂವಯ್ಯ ಚಿತ್ರದ ಇಬ್ಬರು ನಾಯಕಿಯರು. (ದಟ್ಸ್ಕನ್ನಡ ಸಿನಿವಾರ್ತೆ)