Don't Miss!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- News India weather: ಮಳೆಗಾಗಿ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೋಗಯ್ಯ ಯಶಸ್ಸಿಗೆ ಶಿವರಾಜ್ ಕುಮಾರ್ ವಿಶೇಷ ಪೂಜೆ
ತಮ್ಮ ಮಹತ್ವಾಕಾಂಕ್ಷಿ ಚಿತ್ರ ಜೋಗಯ್ಯ ಯಶಸ್ವಿಯಾಗಲಿ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಶಿವನ ಸಮುದ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಾರಮ್ಮ ದೇವಿ ಹಾಗೂ ಸೋಮನಾಥೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ಜೋಗಯ್ಯ ಯಶಸ್ವಿಯಾಗಲಿ ಎಂದು ಬೇಡಿಕೊಂಡರು.
ತಮ್ಮ ಯಾವುದೇ ಚಿತ್ರ ಬಿಡುಗಡೆಯಾದಾಗಲೂ ಚಿತ್ರ ಯಶಸ್ವಿಯಾಗಲಿ ಎಂದು ದೇವರಿಗೆ ಪೂಜೆ ಸಲ್ಲಿಸುವುದು ಪರಿಪಾಠ ಎಂದು ಈ ಸಂದರ್ಭದಲಿ ಶಿವಣ್ಣ ತಿಳಿಸಿದರು. ಶಿವರಾಜ್ ಕುಮಾರ್ ಆಗಮಿಸುತ್ತಾರೆ ಎಂದು ಮೊದಲೆ ತಿಳಿದಿದ್ದ ಕಾರಣ ಅವರ ಅಪಾರ ಅಭಿಮಾನಿಗಳು ಕಾದು ಕುಳಿತಿದ್ದರು.
ಶಿವನಸಮುದ್ರಕ್ಕೆ ಶಿವಣ್ಣ ಆಗಮಿಸುತ್ತಿದ್ದಂತೆ ತಮ್ಮ ನೆಚ್ಚಿನ ನಟನನ್ನು ಕಂಡು ಖುಷಿಪಟ್ಟರು. ಆಗಸ್ಟ್ 19ರಂದು ಚಿತ್ರ ಬಿಡುಗಡೆಯಾಗುತ್ತಿದೆ. ತಾವೆಲ್ಲರೂ ತಪ್ಪದೆ ಚಿತ್ರವನ್ನು ನೋಡಬೇಕು ಎಂದು ಶಿವಣ್ಣ ಅಭಿಮಾನಿಗಳಲ್ಲಿ ವಿನಂತಿಸಿಕೊಂಡರು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಪರದಾಡಬೇಕಾಯಿತು. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಪ್ರೇಮ್ ಸೇರಿದಂತೆ ಸಾಯಿಪ್ರಕಾಶ್, ಶಿವಣ್ಣ ಅಭಿಮಾನಿಗಳ ಸಂಘದ ಅಧ್ಯಕ್ಷ ಪ್ರಭು ಮುಂತಾದವರು ಉಪಸ್ಥಿತರಿದ್ದರು. (ದಟ್ಸ್ಕನ್ನಡ ಸಿನಿವಾರ್ತೆ)