Don't Miss!
- News BREAKING: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಸಾವು
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮದುವೆ ಮನೆ'ಯ ಮದುಮಗಳು ಶ್ರದ್ಧಾ ಆರ್ಯ
ಗೋಲ್ಡನ್ ಸ್ಟಾರ್ ಗಣೇಶ್ ಗೆ ಕಡೆಗೂ ಹೊಸ ಬೆಡಗಿ ಸಿಕ್ಕಿದ್ದಾಳೆ, ಹೆಸರು ಶ್ರದ್ಧಾ ಆರ್ಯಾ! ಹಿಂದಿ, ತೆಲುಗು, ತಮಿಳಿನ ಅನೇಕ ಚಿತ್ರಗಳಲ್ಲಿ ಶ್ರದ್ಧಾ ಆರ್ಯ ಅಭಿನಯಿಸಿದ್ದಾರೆ. ಈ ಹಿಂದೆಯೇ ಗಣೇಶ್ ಜೊತೆ 'ಉಲ್ಲಾಸ ಉತ್ಸಾಹ' ಚಿತ್ರದಲ್ಲಿ ನಟಿಸಬೇಕಾಗಿತ್ತು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಆಕೆಯ ಸ್ಥಾನಕ್ಕೆ ಯಾಮಿ ಗೌತಮ್ ಬಂದಿದ್ದರು.
'ಉಲ್ಲಾಸ ಉತ್ಸಾಹ' ಚಿತ್ರದಲ್ಲಿ ತಪ್ಪಿದ ಅವಕಾಶ 'ಮದುವೆ ಮನೆ'ಯಲ್ಲಿ ಕೈಹಿಡಿದಿದೆ. ಏ.12ರಿಂದ ಚಿತ್ರೀಕರಣ ಆರಂಭಿಸಲಿರುವ ಗಣೇಶರ ಹೊಸ ಚಿತ್ರ 'ಮದುವೆ ಮನೆ'ಯ ಮದುಮಗಳು ಈಕೆ. 'ಯಜಮಾನ', 'ಹುಚ್ಚ' ತರಹದ ಹಿಟ್ ಚಿತ್ರಗಳ ನಿರ್ಮಾಪಕ ಎಚ್ ಎ ರಹಮಾನ್ ಮತ್ತು ರುಹಿನಾ ರಹಮಾನ್ ನಿರ್ಮಿಸುತ್ತಿರುವ ಚಿತ್ರ ಇದಾಗಿದೆ.
'ಮದುವೆ ಮನೆ'ಗೆ ಆಕ್ಷನ್, ಕಟ್ ಹೇಳುತ್ತಿರುವವರು ಸುನೀಲ್ ಕುಮಾರ್ ಸಿಂಗ್. ಶೇಖರ್ ಚಂದ್ರ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಸಂಗೀತ ಚಿತ್ರಕ್ಕಿದೆ. ಸದ್ಯಕ್ಕೆ ಗಣೇಶರ ಹೊಸ ಚಿತ್ರದ ನಾಯಕಿ ಯಾರು ಎಂಬ ಬಗ್ಗೆ ಇದ್ದ ಕುತೂಹಲಕ್ಕೆ ತೆರೆಬಿದ್ದಿದೆ. ಒಟ್ಟಾರೆಯಾಗಿ ಉಲ್ಲಾಸ ಉತ್ಸಾಹದಿಂದ ಶ್ರದ್ಧಾ ಆರ್ಯರನ್ನು ಗಣೇಶ್ ಮದುವೆ ಮನೆಗೆ ಕರೆತಂದಿದ್ದಾರೆ.