Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ
2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.
'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ ಪ್ರದರ್ಶನಗೊಂಡಿದೆ. ಇದೀಗ ಸಾರ್ವಜನಿಕರ ಪ್ರದರ್ಶನಕ್ಕಾಗಿ ಪಿಂಕಿ ಬೆಂಗಳೂರಿಗೆ ಆಗಮಿಸಿದ್ದಾಳೆ. ಸೀಳ್ದುಟಿ ಸಮಸ್ಯೆಯ ಬಗ್ಗೆ ಈ ಸಾಕ್ಷ್ಯ ಚಿತ್ರ ಬೆಳಕು ಚೆಲ್ಲುತ್ತದೆ.
ಈ ಬಗ್ಗ್ಗೆ ಮಾತನಾಡಿದ ಚಿತ್ರದ ನಿರ್ದೇಶಕಿ ಮೇಗನ್ ಮೈಲಾನ್, ಚಿತ್ರದಲ್ಲಿ ನೇರ ಮತ್ತು ಸರಳ ಸಂದೇಶವಿದೆ.ಸೀಳ್ದುಟಿ ಸಮಸ್ಯೆ ಚಿಕಿತ್ಸೆ ಇದೆ. ಈ ಸಮಸ್ಯೆಯನ್ನು ಗುಣಪಡಿಸಬಹುದು. ಯಾವುದೇ ಮಗು ಸಮಸ್ಯೆಯಿಂದ ಬಳಲಬಾರದು. ಅದಕ್ಕೆ ಸೂಕ್ತ ಚಿಕಿತ್ಸೆ ಕೊಡಿಸಿ ನ್ಯ್ಯೂನ್ಯತೆಯನ್ನು ಸರಿಪಡಿಸಬೇಕು ಎಂದು ತಿಳಿಸಿದ್ದಾರೆ.
ಸೀಳ್ದುಟಿಯಿಂದ ಬಳಲುತ್ತಿದ್ದ ಮಗು ಸಾಮಾಜಿಕವಾಗಿ ದೂರವಾಗುತ್ತದೆ. ಹುಡುಗಿಯ ಕುರಿತಾದ 'ಸ್ಮೈಲ್ ಪಿಂಕಿ' ಎಂಬ ಸಾಕ್ಷ್ಯ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಒಲಿದುಬಂದಿತ್ತು. ಒಂದು ಅಂದಾಜಿನ ಪ್ರಕಾರ ಭಾರತದಲ್ಲಿ ಹತ್ತು ಲಕ್ಷ ಮಂದಿ ಸೀಳ್ದುಟಿ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಈ ಸಮಸ್ಯೆಗೆ ಉಚಿತವಾಗಿ ಚಿಕಿತ್ಸೆ ನೀಡುವ ಸ್ಮೈಲ್ ಟ್ರೈನ್ ಎಂಬ ಸಂಸ್ಥೆ ಯ ಬಗ್ಗೆ ಈ ಸಾಕ್ಷ್ಗ್ಯ ಚಿತ್ರ ಬೆಳಕು ಚೆಲ್ಲುತ್ತದೆ. ಬೆಂಗಳೂರಿನಲ್ಲಿ ಎರಡು ಶಾಖೆಗಳು ಸೇರಿದಂತೆ ಭಾರತದಲ್ಲಿ ಒಟ್ಟು 160 ಶಾಖೆಗಳನ್ನು ಈ ಸಂಸ್ಥೆ ಹೊಂದಿದೆ. ಮಹಾವೀರ್ ಜೈನ್ ಆಸ್ಪತ್ರೆ ಮತ್ತು ಬೆಂಗಳೂರು ಆಸ್ಪತ್ರೆ ತಿಂಗಳಿಗೆ 60 ಮಂದಿಗೆ ಸೀಳ್ದುಟಿ ಸಮಸ್ಯೆಯನ್ನು ಬಗೆಹರಿಸುತ್ತಿವೆ.
(ದಟ್ಸ್ ಕನ್ನಡ ಚಿತ್ರವಾರ್ತೆ)