ಈ ವಾರ ಬಹುನಿರೀಕ್ಷಿತ ತಮಸ್ಸು ತೆರೆಗೆ
'ಆ ದಿನಗಳು' ಎಂಬ ಯಶಸ್ವಿ ಚಿತ್ರ ಸೇರಿದಂತೆ ಕೆಲವು ಚಿತ್ರಗಳಿಗೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದ ಪತ್ರಕರ್ತ ಅಗ್ನಿಶ್ರೀಧರ್ 'ತಮಸ್ಸು' ಚಿತ್ರವನ್ನು ಬಹಳ ಆಸ್ಥೆಯಿಂದ ನಿರ್ದೇಶಿಸಿದ್ದಾರೆ. ಮೇಘ ಮೂವೀಸ್ ಲಾಂಛನದಲ್ಲಿ ಸೈಯದ್ ಅಮಾನ್ ಹಾಗೂ ರವೀಂದ್ರ ನಿರ್ಮಿಸಿರುವ 'ತಮಸ್ಸು' ಚಿತ್ರ ಈ ವಾರ(ಜೂ.11) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಚಿತ್ರದ ಕಥೆಗಾರರಾಗಿರುವ ಅವರು ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿದ್ದಾರೆ. ಸಂದೀಪ್ ಚೌಟ ಸಂಗೀತ ನೀಡಿದ್ದಾರೆ. ಶಿವರಾಜಕುಮಾರ್ ನಾಯಕನಾಗಿ, ಪದ್ಮಪ್ರಿಯ ನಾಯಕಿಯಾಗಿ ಅಭಿನಯಿಸಿರುವ ಚಿತ್ರದ ಉಳಿದ ತಾರಾಬಳಗದಲ್ಲಿ ನಾಸರ್, ಹರ್ಷಿಕಾ ಪೂಣಚ್ಛ, ಆಸೀಪ್, ಸುಧಾ ಬೆಳವಾಡಿ, ಸತ್ಯ ಮುಂತಾದವರಿದ್ದಾರೆ.
ಸುಂದರನಾಥ ಸುವರ್ಣ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ನಾಗೇಂದ್ರ ಅರಸ್ ಸಂಕಲನವಿದೆ. ಡಿಫ಼ರೆಂಟ್ ಡ್ಯಾನಿ ಸಾಹಸ, ಶಶಿಧರ್ ಅಡಪ ಕಲಾ ನಿರ್ದೇಶನ ಹಾಗೂ ಮಧುಗಿರಿ ಪ್ರಕಾಶ್ ಅವರ ನಿರ್ಮಾಣ ನಿರ್ವಹಣೆ 'ತಮಸ್ಸು ಚಿತ್ರಕ್ಕಿದೆ.
More from Filmibeat
ತಮಸ್ಸು ಸೆನ್ಸಾರ್ ಅಗ್ನಿ ಶ್ರೀಧರ್ ಶಿವರಾಜ್ ಕುಮಾರ್ ಹ್ಯಾಟ್ರಿಕ್ ಹೀರೋ ಪದ್ಮಪ್ರಿಯಾ ಸಂದೀಪ್ ಚೌಟ thamassu shiva rajkumar padmapriya agni sridhar sandeep chowta


Click it and Unblock the Notifications











