ವಿಭಿನ್ನ ಪ್ರೇಮ ಕಥಾನಕ ಧೂಳ್ ವಿಶೇಷಗಳು
ಶ್ರೀಸೇವಾಲಾಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಂ.ಎಚ್.ಸುನೀಲ್ ನಿರ್ಮಿಸುತ್ತಿರುವ 'ಧೂಳ್ ಚಿತ್ರಕ್ಕೆ ನಗರದಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಐದು ಹಾಡುಗಳ ಚಿತ್ರೀಕರಣ ಬಾಕಿಯಿದ್ದು, ನವೆಂಬರ್ನಲ್ಲಿ ಹಾಡುಗಳ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಬೇಡಿಕೆ ನಟರಾಗಿರುವ ಯೋಗೀಶ್ ಈ ಚಿತ್ರದ ನಾಯಕನ ಪಾತ್ರ ನಿರ್ವಹಣೆ ಮಾಡುತ್ತಿದ್ದು, 'ಮೆರವಣಿಗೆಯ ಬೆಡಗಿ ಅಂದ್ರಿತಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಖ್ಯಾತ ನಿರ್ದೇಶಕ ಎಂ.ಎಸ್.ರಾಜಶೇಖರ್ ಅವರ ಪುತ್ರ ಧರಣಿ ಈ ವಿಭಿನ್ನ ಪ್ರೇಮ ಕಥಾನಕವನ್ನು ನಿರ್ದೇಶಿಸುತ್ತಿದ್ದಾರೆ. ವಿ.ಹರಿಕೃಷ್ಣ ಅವರ ರಾಗ ಸಂಯೋಜನೆಯಲ್ಲಿ ಮೂಡಿ ಬಂದಿರುವ ಚಿತ್ರದ ಐದು ಹಾಡುಗಳನ್ನು ರಮಣೀಯ ಸ್ಥಳಗಳಲ್ಲಿ ಚಿತ್ರೀಕರಣಗೊಳ್ಳಲಿದೆ.
ಕೆ.ಎಚ್.ದತ್ತು ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕೆ.ರಾಮ್ನಾರಾಯಣ್ ಸಂಭಾಷಣೆ ರಚಿಸಿದ್ದಾರೆ. ಮೋಹನ್ ಪಂಡಿತ್ ಕಲೆ ಹಾಗೂ ರವಿವರ್ಮ ಅವರ ಸಾಹಸವಿರುವ ಈ ಚಿತ್ರದ ತಾರಾಬಳಗದಲ್ಲಿ ಯೋಗೀಶ್, ಅಂದ್ರಿತಾ ರೇ, ಪ್ರಕಾಶ್ ರೈ, ಓಂಪ್ರಕಾಶ್ರಾವ್ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)


Click it and Unblock the Notifications











