Don't Miss!
- News Tamarind Fruit Juice: ಬಾಯಾರಿಕೆ ನೀಗಿಸಲು ಹುಣಸೆ ಹಣ್ಣಿನ ಪಾನಕ ಪರಿಚಯಿಸಿದ ಆಯುಷ್ ಇಲಾಖೆ, ಮಾಡುವುದು ಹೇಗೆ?
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆನೆ ಬಂತೊಂದಾನೆ.. ಇದು ‘ಕೃಷ್ಣೇಗೌಡನ ಆನೆ’!
‘ಮೋಹಿನಿ’ ಗೆಲುವಿನಿಂದ ಖುಷಿಯಲ್ಲಿರುವ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ತಮ್ಮ ಮುಂದಿನ ಚಿತ್ರಕ್ಕೆ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ನೀಳ್ಗತೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಚಿತ್ರದ ನಾಯಕ ಜಗ್ಗೇಶ್.
ಪತ್ರಿಕೆಯಾಂದರಲ್ಲಿ ಧಾರಾವಾಹಿಯಾಗಿ ಮೂಡಿಬಂದ ‘ಕೃಷ್ಣೇಗೌಡನ ಆನೆ’ ಸಿನಿಮಾ ಆಗುತ್ತಿದೆ. ಚಿತ್ರದ ಚಿತ್ರೀಕರಣ ಸೆ.10ರಂದು ಆರಂಭಗೊಳ್ಳಲಿದೆ. ತೀರ್ಥಹಳ್ಳಿ ಸುತ್ತಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣ ಪೂರೈಸಲು ಬಾಬು ಯೋಜನೆ ರೂಪಿಸಿದ್ದಾರೆ.
ತೀರ್ಥಹಳ್ಳಿಗೂ ಬಾಬೂಗೂ ಬಿಡದ ನಂಟು. ತಮ್ಮ ಹಿಂದಿನ ‘ಮುಂಗಾರಿನ ಮಿಂಚು’ ಚಿತ್ರದಲ್ಲಿ ಮಲೆನಾಡಿನ ಚೆಲುವು, ಮಳೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿದ್ದರು. ‘ಕೃಷ್ಣೇಗೌಡನ ಆನೆ’ ಪ್ರೇಕ್ಷಕರನ್ನು ರಂಜಿಸುವಲ್ಲಿ ಅನುಮಾನವೇ ಇಲ್ಲ ಎನ್ನುವ ವಿಶ್ವಾಸ ಬಾಬು ಅವರಲ್ಲಿದೆ. ಚಿತ್ರದ ಪ್ರಮುಖ ಪಾತ್ರಧಾರಿಯಾದ ಬೃಹತ್ ಆನೆಯನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ.
‘ಮಠ’, ‘ಹನಿಮೂನ್ ಎಕ್ಸ್ಪ್ರೆಸ್’ ಮತ್ತಿತರ ಸಿನಿಮಾಗಳು ಗೆದ್ದರೂ, ಜಗ್ಗೇಶ್ ಮತ್ತೆ ಗಾಂಧಿನಗರದಲ್ಲಿ ಬಿಜಿಯಾಗಲಿಲ್ಲ. ಅವರಿಗೀಗ ‘ಕೃಷ್ಣೇಗೌಡನ ಆನೆ’ ಮೇಲೆ ಭರವಸೆ. ಹಂಸಲೇಖ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.