Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅವರ ನಿರ್ದೇಶನದಲ್ಲಿ 'ಮಯೂರ' ಚಿತ್ರ ಬರಬೇಕಿತ್ತು
ಹೈದರಾಬಾದ್, ಜ.8: ಪುನೀತ್ ರಾಜ್ಕುಮಾರ್ ಅಭಿನಯದ 'ಮಯೂರ' ಚಿತ್ರದ ನಿರ್ದೇಶಕ ಶೋಭನ್(38) ಸೋಮವಾರ ರಾತ್ರಿ ಸುಮಾರು 8 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಹು ನಿರೀಕ್ಷೆಯ ಮಯೂರ ಚಿತ್ರವನ್ನು ಅವರು ನಿರ್ದೇಶಿಸಬೇಕಿತ್ತು.
ಚಿತ್ರಕತೆಯೊಂದಕ್ಕೆ ಸಂಬಂಧಿಸಿದಂತೆ ನಟಿ ಭೂಮಿಕಾ ಅವರೊಂದಿಗೆ ಚರ್ಚಿಸುತ್ತಿದ್ದಾಗ ಹಠಾತ್ತಾಗಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತು. ಭೂಮಿಕ ಮತ್ತವರ ಪತಿ ಭರತ್ ಠಾಕೂರ್ ಆ ಕೂಡಲೇ ಅವರನ್ನು ಮಾಧಾಪುರ್ನಲ್ಲಿನ 'ಇಮೇಜ್' ಆಸ್ಪತ್ರೆಗೆ ಸಾಗಿಸಿದರು. ಆದರೆ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ಮೂಲತಃ ಆಂಧ್ರಪ್ರದೇಶದವರಾದ ಶೋಭನ್ ವರ್ಷಂ, ಬಾಬಿಯಂತಹ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದರು. ಯಶಸ್ವಿ ನಿರ್ದೇಶಕ ಎಂಬ ಹೆಸರೂ ಅವರ ಅನ್ವರ್ಥವಾಗಿತ್ತು. ಆರ್.ಎಸ್. ಪ್ರೊಡಕ್ಷನ್ ಲಾಂಛನದಲ್ಲಿ ಕನಕಪುರ ಶ್ರೀನಿವಾಸ್ ನಿರ್ಮಿಸುತ್ತಿರುವ, ಪುನೀತ್ ಅಭಿನಯದ 'ಮಯೂರ' ಚಿತ್ರವನ್ನು ನಿರ್ದೇಶಿಸಬೇಕಿತ್ತು. ಮಯೂರ ಚಿತ್ರದ ಮುಹೂರ್ತವು ಡಿ.14ರಂದು ಇಸ್ಕಾನ್ ದೇವಾಲಯದಲ್ಲಿ ಬಹಳ ಅದ್ದೂರಿಯಾಗಿ ನಡೆದಿತ್ತು. ಆ ಸಂದರ್ಭದಲ್ಲಿ ಶೋಭನ್ ಸಹ ಹಾಜರಿದ್ದರು. ಚಿತ್ರೀಕರಣ ಜ.16ಕ್ಕೆ ಮುಂದೂಡಲ್ಪಟ್ಟ ಕಾರಣ ಅವರು ತಮ್ಮ ಸ್ವಂತ ಊರಿಗೆ ವಾಪಸ್ಸಾಗಿದ್ದರು.
ಬಾಲಿವುಡ್ ನಿರ್ದೇಶಕ ರಾಮ್ಗೋಪಾಲ್ ವರ್ಮಾರ ಗರಡಿಯಲ್ಲಿ ಚಿತ್ರರಂಗದ ಪಟ್ಟುಗಳನ್ನು ಕಲಿತವರು ಶೋಭನ್. ವರ್ಮಾ ನಿರ್ದೇಶನದ ತೆಲುಗಿನ 'ಕ್ಷಣ ಕ್ಷಣಂ' ಚಿತ್ರದಲ್ಲಿ ನಟಿಸಿದ್ದರೂ ಸಹಾ. ಇತ್ತೀಚಿನ ಕೆಲವು ತೆಲುಗು ಚಿತ್ರಗಳಲ್ಲಿ ಹಾಸ್ಯ ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಶೋಭನ್ ಅವರ ಹಠಾತ್ ನಿಧನದಿಂದ ಆಘಾತಗೊಂಡಿರುವ ಭೂಮಿಕಾ ಅವರ ಸಾವನ್ನು ನಾವು ನಿರೀಕ್ಷಿಸಿರಲಿಲ್ಲ. ನನ್ನ ಪತಿ ಅವರನ್ನು ಉಳಿಸಿಕೊಳ್ಳಲು ಬಹಳಷ್ಟು ಶ್ರಮಿಸಿದರು ಆದರೆ ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ.
ಶೋಭನ್ ಅವರ ಸಾವಿಗೆ ಪುನೀತ್ ಸಂತಾಪ ಸೂಚಿಸಿದ್ದು, ಮಂಗಳವಾರ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವರು ಹೈದರಾಬಾದ್ಗೆ ತೆರಳಿದ್ದಾರೆ.
(ಏಜನ್ಸೀಸ್)