Don't Miss!
- News ಲೋಕಸಭಾ ಚುನಾವಣೆಯಲ್ಲಿ ಕೊಡಗಿನಲ್ಲಿ ಮತ್ತೆ ‘ಕೈ’ ಕಮಾಲ್?: ಒಂದಷ್ಟು ನಾಯಕರು ಮೌನವಾಗಿದ್ದೇಕೆ?
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸಪೇಟೆ: ಜೋಗಯ್ಯ ಅಭಿಮಾನಿಗಳ ಮೇಲೆ ಲಾಠಿಚಾರ್ಜ್
ಹೊಸಪೇಟೆಯ ಲಕ್ಷ್ಮಿ ಮತ್ತು ಮೀರ್ ಆಲಂ ಚಿತ್ರಮಂದಿರಗಳಲ್ಲಿ ಶಿವಣ್ಣರ ಯುವ ಅಭಿಮಾನಿಗಳು ದಾಂಧಲೆ ಎಬ್ಬಿಸಿದ್ದಾರೆ. ಗುರುವಾರ ರಾತ್ರಿಯೇ ಮೊದಲ ಪ್ರದರ್ಶನ ಏರ್ಪಡಿಸಲಾಗಿದೆ ಎಂಬ ಸುದ್ದಿಯ ಬೆನ್ನತ್ತಿ 5-6 ಸಾವಿರ ಅಭಿಮಾನಿಗಳು ಈ ಚಿತ್ರಮಂದಿರಗಳ ಬಳಿ ಜಮಾಯಿಸಿದ್ದರು. ಆದರೆ ಬೆಳಗಾವಿಯಿಂದ ಪ್ರಿಂಟ್ ಬರುವುದು ತಡವಾಗಿ ಪ್ರದರ್ಶನ ವಿಳಂವಾಗಲಿದೆ ಎಂದು ಟಾಕೀಸಿನವರು ಹೇಳಿದಾಗ ಅಭಿಮಾನಿಗಳು ರೊಚ್ಚಿಗೆದ್ದರು.
ಟಾಕೀಸುಗಳ ಮೇಲೆ ಬಾಟಲ್ ಮತ್ತು ಕಲ್ಲು ತೂರಾಟ ನಡೆಸಿ ಗಲಾಟೆ ಎಬ್ಬಿಸಿದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್ ನಡೆಸಿ, ಪರಿಸ್ಥಿತಿಯನ್ನು ತಹಬಂದಿಗೆ ತಂದಿದ್ದಾರೆ. ಘಟನೆಯಲ್ಲಿ ಹತ್ತಾರು ಪೊಲೀಸರು ಮತ್ತು ಶಿವಣ್ಣ ಅಭಿಮಾನಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಡಿವೈಎಸ್ ಪಿ ಎಚ್. ಎಸ್. ಖೇರಿ ತಿಳಿಸಿದ್ದಾರೆ.
ಘಟನೆಯಲ್ಲಿ ಚಿತ್ರಮಂದಿರದ ಜಾಗುಗಳು ಪುಡಿಪುಡಿಯಾಗಿವೆ. ಆಸ್ತಿಪಾಸ್ತಿಗೆ ನಷ್ಟವುಂಟಾಗಿದೆ ಎಂದು ಎರಡೂ ಟಾಕೀಸುಗಳ ಮಾಲೀಕರು ದೂರು ನೀಡಿದ್ದು ಹೊಸಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.