Don't Miss!
- News KRS ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ: ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಡಿಕೇರಿಗೆ ಬಂದು ಮಾತನಾಡಿದ ಮನಿಷಾ ಕೊಯಿರಾಲಾ
ಬಾಲಿವುಡ್ ನಟಿ ಮನಿಷಾ ಕೊಯಿರಾಲಾ ಕರ್ನಾಟಕಕ್ಕೆ ಬಂದಿದ್ದಾರೆ. ಮಡಿಕೇರಿಯಿಂದ ಐದು ಕಿ. ಮೀ. ದೂರದಲ್ಲಿರುವ ಡಾ. ಪ್ರೇಮನಾಥ್ ಪೂಂಜಾ ತೋಟದಲ್ಲಿ ಮೊನ್ನೆ ಬುಧವಾರ, ಮಾರ್ಚ್ 7, 2012ರಂದು ಪ್ರತ್ಯಕ್ಷವಾಗಿದ್ದರು ನಟಿ ಮನಿಷಾ ಕೊಯಿರಾಲಾ. ಅವರೊಂದು ಚಿತ್ರೀದ ಚಿತ್ರೀಕರಣದಲ್ಲಿ ಭಾಗವಹಿಸಲು ಅಲ್ಲಿಗೆ ಬಂದಿದ್ದರು.
ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕ ಲೆನಿನ್ ರಾಜೇಂದ್ರನ್ ನಿರ್ದೇಶನದ 'ಇಡಪದವಿ' ಎಂಬ ಚಿತ್ರದಲ್ಲಿ ಪ್ರಮುಖ ಪಾತ್ರವೊಂದನ್ನು ಪೋಷಿಸುತ್ತಿರುವ ಮನಿಷಾ ಕೊಯಿರಾಲಾ, ಈ ಮೂಲಕ ದಕ್ಷಿಣ ಭಾರತದತ್ತ ಮುಖ ಮಾಡಿದಂತಾಗಿದೆ. ಬಾಲಿವುಡ್ ಚಿತ್ರಗಳಲ್ಲಿ ಈಕೆ ಇತ್ತೀಚಿಗೆ ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ.
ಮಡಿಕೇರಿಯಲ್ಲಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮನಿಷಾ, ಕನ್ನಡದಲ್ಲಿ ಒಳ್ಳೆಯ ನಿರ್ದೇಶಕರ ಚಿತ್ರದಲ್ಲಿ ನಟಿಸಲು ಆಫರ್ ಬಂದರೆ ನಾನು ಖಂಡಿತ ಸಿದ್ಧ. ನಾನು ಒಂದೇ ಭಾಷೆಗೆ ಸೀಮತವಾಗಲಾರೆ. ಬೇರೆ ಬೇರೆ ಭಾಷೆಗಳಲ್ಲಿ ನಟಿಸುವುದು ಪ್ರತಿಯೊಬ್ಬ ಕಲಾವಿದೆಗೂ ಸವಾಲು" ಎಂದಿದ್ದಾರೆ. ಇನ್ನು ಕನ್ನಡದ ನಿರ್ಮಾಪಕರು, ನಿರ್ದೇಶಕರು ಮನಿಷಾ ಮೊಬೈಲ್ ಗೆ ಕಾಲ್ ಮಾಡಬಹುದು. (ಒನ್ ಇಂಡಿಯಾ ಕನ್ನಡ)