Don't Miss!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- News Karnataka Rain: ರಾಜ್ಯಕ್ಕೆ ಶೇ.20ರಷ್ಟು ಮಳೆ ಕೊರತೆ: ಏಪ್ರಿಲ್ 25 ದಿನದಲ್ಲಿ ಸುರಿದ ಮಳೆ ವರದಿ ಇಲ್ಲಿದೆ
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಡಿಕೇರಿಗೆ ಬಂದು ಮಾತನಾಡಿದ ಮನಿಷಾ ಕೊಯಿರಾಲಾ
ಬಾಲಿವುಡ್ ನಟಿ ಮನಿಷಾ ಕೊಯಿರಾಲಾ ಕರ್ನಾಟಕಕ್ಕೆ ಬಂದಿದ್ದಾರೆ. ಮಡಿಕೇರಿಯಿಂದ ಐದು ಕಿ. ಮೀ. ದೂರದಲ್ಲಿರುವ ಡಾ. ಪ್ರೇಮನಾಥ್ ಪೂಂಜಾ ತೋಟದಲ್ಲಿ ಮೊನ್ನೆ ಬುಧವಾರ, ಮಾರ್ಚ್ 7, 2012ರಂದು ಪ್ರತ್ಯಕ್ಷವಾಗಿದ್ದರು ನಟಿ ಮನಿಷಾ ಕೊಯಿರಾಲಾ. ಅವರೊಂದು ಚಿತ್ರೀದ ಚಿತ್ರೀಕರಣದಲ್ಲಿ ಭಾಗವಹಿಸಲು ಅಲ್ಲಿಗೆ ಬಂದಿದ್ದರು.
ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕ ಲೆನಿನ್ ರಾಜೇಂದ್ರನ್ ನಿರ್ದೇಶನದ 'ಇಡಪದವಿ' ಎಂಬ ಚಿತ್ರದಲ್ಲಿ ಪ್ರಮುಖ ಪಾತ್ರವೊಂದನ್ನು ಪೋಷಿಸುತ್ತಿರುವ ಮನಿಷಾ ಕೊಯಿರಾಲಾ, ಈ ಮೂಲಕ ದಕ್ಷಿಣ ಭಾರತದತ್ತ ಮುಖ ಮಾಡಿದಂತಾಗಿದೆ. ಬಾಲಿವುಡ್ ಚಿತ್ರಗಳಲ್ಲಿ ಈಕೆ ಇತ್ತೀಚಿಗೆ ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ.
ಮಡಿಕೇರಿಯಲ್ಲಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮನಿಷಾ, ಕನ್ನಡದಲ್ಲಿ ಒಳ್ಳೆಯ ನಿರ್ದೇಶಕರ ಚಿತ್ರದಲ್ಲಿ ನಟಿಸಲು ಆಫರ್ ಬಂದರೆ ನಾನು ಖಂಡಿತ ಸಿದ್ಧ. ನಾನು ಒಂದೇ ಭಾಷೆಗೆ ಸೀಮತವಾಗಲಾರೆ. ಬೇರೆ ಬೇರೆ ಭಾಷೆಗಳಲ್ಲಿ ನಟಿಸುವುದು ಪ್ರತಿಯೊಬ್ಬ ಕಲಾವಿದೆಗೂ ಸವಾಲು" ಎಂದಿದ್ದಾರೆ. ಇನ್ನು ಕನ್ನಡದ ನಿರ್ಮಾಪಕರು, ನಿರ್ದೇಶಕರು ಮನಿಷಾ ಮೊಬೈಲ್ ಗೆ ಕಾಲ್ ಮಾಡಬಹುದು. (ಒನ್ ಇಂಡಿಯಾ ಕನ್ನಡ)