Don't Miss!
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಡಿಕೇರಿಗೆ ಬಂದು ಮಾತನಾಡಿದ ಮನಿಷಾ ಕೊಯಿರಾಲಾ
ಬಾಲಿವುಡ್ ನಟಿ ಮನಿಷಾ ಕೊಯಿರಾಲಾ ಕರ್ನಾಟಕಕ್ಕೆ ಬಂದಿದ್ದಾರೆ. ಮಡಿಕೇರಿಯಿಂದ ಐದು ಕಿ. ಮೀ. ದೂರದಲ್ಲಿರುವ ಡಾ. ಪ್ರೇಮನಾಥ್ ಪೂಂಜಾ ತೋಟದಲ್ಲಿ ಮೊನ್ನೆ ಬುಧವಾರ, ಮಾರ್ಚ್ 7, 2012ರಂದು ಪ್ರತ್ಯಕ್ಷವಾಗಿದ್ದರು ನಟಿ ಮನಿಷಾ ಕೊಯಿರಾಲಾ. ಅವರೊಂದು ಚಿತ್ರೀದ ಚಿತ್ರೀಕರಣದಲ್ಲಿ ಭಾಗವಹಿಸಲು ಅಲ್ಲಿಗೆ ಬಂದಿದ್ದರು.
ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕ ಲೆನಿನ್ ರಾಜೇಂದ್ರನ್ ನಿರ್ದೇಶನದ 'ಇಡಪದವಿ' ಎಂಬ ಚಿತ್ರದಲ್ಲಿ ಪ್ರಮುಖ ಪಾತ್ರವೊಂದನ್ನು ಪೋಷಿಸುತ್ತಿರುವ ಮನಿಷಾ ಕೊಯಿರಾಲಾ, ಈ ಮೂಲಕ ದಕ್ಷಿಣ ಭಾರತದತ್ತ ಮುಖ ಮಾಡಿದಂತಾಗಿದೆ. ಬಾಲಿವುಡ್ ಚಿತ್ರಗಳಲ್ಲಿ ಈಕೆ ಇತ್ತೀಚಿಗೆ ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ.
ಮಡಿಕೇರಿಯಲ್ಲಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮನಿಷಾ, ಕನ್ನಡದಲ್ಲಿ ಒಳ್ಳೆಯ ನಿರ್ದೇಶಕರ ಚಿತ್ರದಲ್ಲಿ ನಟಿಸಲು ಆಫರ್ ಬಂದರೆ ನಾನು ಖಂಡಿತ ಸಿದ್ಧ. ನಾನು ಒಂದೇ ಭಾಷೆಗೆ ಸೀಮತವಾಗಲಾರೆ. ಬೇರೆ ಬೇರೆ ಭಾಷೆಗಳಲ್ಲಿ ನಟಿಸುವುದು ಪ್ರತಿಯೊಬ್ಬ ಕಲಾವಿದೆಗೂ ಸವಾಲು" ಎಂದಿದ್ದಾರೆ. ಇನ್ನು ಕನ್ನಡದ ನಿರ್ಮಾಪಕರು, ನಿರ್ದೇಶಕರು ಮನಿಷಾ ಮೊಬೈಲ್ ಗೆ ಕಾಲ್ ಮಾಡಬಹುದು. (ಒನ್ ಇಂಡಿಯಾ ಕನ್ನಡ)