Don't Miss!
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯುವ ಪ್ರೇಮಿಗಳ ಹೃದಯ ಕದಿಯುವ'ಇನಿಯ'
ಶ್ರೀಧರ್ ಸಂಗೀತದಲ್ಲಿ ಮೂಡಿ ಬಂದಿರುವ ಚಿತ್ರದ ಹಾಡುಗಳು ಈಗಾಗಲೇ ಅಭಿಮಾನಿಗಳ ಮನ ಸೂರೆಗೊಂಡಿದ್ದು, ಚಿತ್ರ ಕೂಡ ಪ್ರೇಕ್ಷಕನ ಮೆಚ್ಚುಗೆಗೆ ಪಾತ್ರವಾಗಲಿದೆ ಎನ್ನುತ್ತಾರೆ ನಿರ್ಮಾಪಕ ಶೈಲೇಂದ್ರ ಬಾಬು.ಕಳೆದ ಸಾಲಿನ ಯಶಸ್ವಿ ಚಿತ್ರಗಳಲ್ಲಿ 'ಮುಸ್ಸಂಜೆ ಮಾತು' ಕೂಡ ಒಂದು. ಈ ಸದಭಿರುಚಿ ಚಿತ್ರವನ್ನು ನಿರ್ದೇಶಿಸಿದ ಮಹೇಶ್ ಈಗ 'ಇನಿಯ' ಚಿತ್ರವನ್ನು ನಿರ್ದೇಶಿಸುತ್ತಿದ್ದು, ಈ ಚಿತ್ರ ಯುವ ಪ್ರೇಮಿಗಳ ಹೃದಯಗಳಿಗೆ ಹತ್ತಿರವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಬಾಲಾಜಿ ಅವರು ಚಿತ್ರದ ನಾಯಕರಾಗಿದ್ದು, ಪೂಜಾ ಗಾಂಧಿ 'ಇನಿಯ'ನ ನಾಯಕಿಯಾಗಿದ್ದಾರೆ. ನಿರ್ದೇಶಕರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸುಂದರನಾಥ ಸುವರ್ಣರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಮದುಸೂಧನ ರೆಡ್ಡಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಕವಿರಾಜ್, ಶ್ರೀಧರ್ ಗೀತರಚನೆ, ಮೋಹನ್ ಸಂಕಲನ, ರವಿವರ್ಮರ ಸಾಹಸವಿರುವ ಚಿತ್ರದ ತಾರಾಬಳಗದಲ್ಲಿ ಜೈಜಗದೀಶ್, ಊರ್ವಶಿ, ರೇಖಾ, ಜ್ಯೋತಿ, ನೀನಾಸಂ ಅಶ್ವತ್, ಹರೀಶ್ ರಾಯ್, ಲೋಕನಾಥ್, ಬಿ.ವಿ.ರಾಧ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)