Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಣಜಿ, ಓಂ ವಿರುದ್ಧ ಮಾನನಷ್ಟ ಮೊಕದ್ದಮೆ ಗುಡುಗು
"ನಮ್ಮದು ಮರ್ಯಾದಸ್ಥ ಕುಟುಂಬ. ಈ ಚಿತ್ರದಲ್ಲಿ ಬಂದ ಆ ಪಾತ್ರದಿಂದ ನಮ್ಮ ಕುಟುಂಬಕ್ಕೆ ಅವಮಾನವಾಗಿದೆ. ಜನರು ನಮ್ಮನ್ನು ತಪ್ಪಾಗಿ ತಿಳಿದುಕೊಳ್ಳಲು ಈ ಚಿತ್ರದಿಂದ ಅವಕಾಶವಾಗಿದೆ. ಹಾಗಾಗಿ ಚಿತ್ರದಿಂದ ಆ ಪಾತ್ರ ಹಾಗೂ ಹೆಸರನ್ನು ಕಿತ್ತೊಗೆಯಬೇಕು. ಇಲ್ಲದಿದ್ದರೆ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಪಡಿಸುತ್ತೇವೆ ಹಾಗೂ ಕಾನೂನಿನ ಮೂಲಕ ಹೋರಾಟ ಮಾಡುತ್ತೇವೆ. ಅಷ್ಟೇ ಅಲ್ಲ, ಮಾನನಷ್ಟ ಮೊಕದ್ದಮೆ ಹೂಡುತ್ತೇವೆ" ಎಂದು ಹೇಳಿದ್ದಾರೆ.
"ನಿರ್ಮಾಪಕ ಅಣಜಿ ನಾಗರಾಜ್ ಅವರಿಗೆ ನಾನು ಯಾವುದೇ ಜೀವ ಬೆದರಿಕೆ ಕರೆ ಮಾಡಿಲ್ಲ. ಚಿತ್ರದಲ್ಲಿ ಬರುವ ಆ ಪಾತ್ರ ಹಾಗೂ ಕೆಟ್ಟದಾಗಿ ಬಿಂಬಿಸಿರುವ ಕುರಿತು ಮಾತನಾಡಿದ್ದೇನೆ ಅಷ್ಟೇ" ಎಂದಿದ್ದಾರೆ ಮಂಜುನಾಥ್ ತಾವರಕೇಡ. ಮಂಜುನಾಥ್ ಮಾತಿಗೆ ಪ್ರತಿಕ್ರಿಯಿಸಿರುವ ಅಣಜಿ ನಾಗರಾಜ್ "ಮಂಜುನಾಥರಿಂದ ನನಗೆ ಯಾವುದೇ ಬೆದರಿಕೆ ಕರೆ ಬಂದಿಲ್ಲ. ಅವರು ಕರೆ ಮಾಡಿ ಮಾತನ್ನಾಡಿದ್ದಾರಷ್ಟೇ" ಎಂದು ಸ್ಪಷ್ಟಪಡಿಸಿದ್ದಾರೆ.
ಕೇಶಪ್ಪ ತಾವರಕೇಡ ಹೆಸರು ಮತ್ತು ಪಾತ್ರ ಕಿತ್ತುಹಾಕುವ ಆಗ್ರಹಕ್ಕೆ ಅಣಜಿ ನಾಗರಾಜ್ "ನಾನು ಚಿತ್ರಕ್ಕೆ ಹಣ ಹಾಕಿದವನು, ನಿರ್ಮಾಪಕ ಅಷ್ಟೇ. ಚಿತ್ರದ ರೂವಾರಿ, ನಿರ್ದೇಶಕರ ಜೊತೆ ಮಾತನಾಡಿ ಖಂಡಿತವಾಗಿಯೂ ಹೆಸರನ್ನು ಮ್ಯೂಟ್ ಮಾಡಿಸುತ್ತೇನೆ. ಅದಕ್ಕೆ ನಾಲ್ಕೈದು ದಿನ ವೇಳೆ ತಗಲುತ್ತದೆ. ಪಾತ್ರವನ್ನು ಕಿತ್ತು ಹಾಕುವ ಕುರಿತೂ ನಿರ್ದೇಶಕರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ" ಎಂದು ಭರವಸೆ ನೀಡಿದ್ದಾರೆ. (ಒನ್ ಇಂಡಿಯಾ ಕನ್ನಡ)