Don't Miss!
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಣಜಿ, ಓಂ ವಿರುದ್ಧ ಮಾನನಷ್ಟ ಮೊಕದ್ದಮೆ ಗುಡುಗು
"ನಮ್ಮದು ಮರ್ಯಾದಸ್ಥ ಕುಟುಂಬ. ಈ ಚಿತ್ರದಲ್ಲಿ ಬಂದ ಆ ಪಾತ್ರದಿಂದ ನಮ್ಮ ಕುಟುಂಬಕ್ಕೆ ಅವಮಾನವಾಗಿದೆ. ಜನರು ನಮ್ಮನ್ನು ತಪ್ಪಾಗಿ ತಿಳಿದುಕೊಳ್ಳಲು ಈ ಚಿತ್ರದಿಂದ ಅವಕಾಶವಾಗಿದೆ. ಹಾಗಾಗಿ ಚಿತ್ರದಿಂದ ಆ ಪಾತ್ರ ಹಾಗೂ ಹೆಸರನ್ನು ಕಿತ್ತೊಗೆಯಬೇಕು. ಇಲ್ಲದಿದ್ದರೆ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಪಡಿಸುತ್ತೇವೆ ಹಾಗೂ ಕಾನೂನಿನ ಮೂಲಕ ಹೋರಾಟ ಮಾಡುತ್ತೇವೆ. ಅಷ್ಟೇ ಅಲ್ಲ, ಮಾನನಷ್ಟ ಮೊಕದ್ದಮೆ ಹೂಡುತ್ತೇವೆ" ಎಂದು ಹೇಳಿದ್ದಾರೆ.
"ನಿರ್ಮಾಪಕ ಅಣಜಿ ನಾಗರಾಜ್ ಅವರಿಗೆ ನಾನು ಯಾವುದೇ ಜೀವ ಬೆದರಿಕೆ ಕರೆ ಮಾಡಿಲ್ಲ. ಚಿತ್ರದಲ್ಲಿ ಬರುವ ಆ ಪಾತ್ರ ಹಾಗೂ ಕೆಟ್ಟದಾಗಿ ಬಿಂಬಿಸಿರುವ ಕುರಿತು ಮಾತನಾಡಿದ್ದೇನೆ ಅಷ್ಟೇ" ಎಂದಿದ್ದಾರೆ ಮಂಜುನಾಥ್ ತಾವರಕೇಡ. ಮಂಜುನಾಥ್ ಮಾತಿಗೆ ಪ್ರತಿಕ್ರಿಯಿಸಿರುವ ಅಣಜಿ ನಾಗರಾಜ್ "ಮಂಜುನಾಥರಿಂದ ನನಗೆ ಯಾವುದೇ ಬೆದರಿಕೆ ಕರೆ ಬಂದಿಲ್ಲ. ಅವರು ಕರೆ ಮಾಡಿ ಮಾತನ್ನಾಡಿದ್ದಾರಷ್ಟೇ" ಎಂದು ಸ್ಪಷ್ಟಪಡಿಸಿದ್ದಾರೆ.
ಕೇಶಪ್ಪ ತಾವರಕೇಡ ಹೆಸರು ಮತ್ತು ಪಾತ್ರ ಕಿತ್ತುಹಾಕುವ ಆಗ್ರಹಕ್ಕೆ ಅಣಜಿ ನಾಗರಾಜ್ "ನಾನು ಚಿತ್ರಕ್ಕೆ ಹಣ ಹಾಕಿದವನು, ನಿರ್ಮಾಪಕ ಅಷ್ಟೇ. ಚಿತ್ರದ ರೂವಾರಿ, ನಿರ್ದೇಶಕರ ಜೊತೆ ಮಾತನಾಡಿ ಖಂಡಿತವಾಗಿಯೂ ಹೆಸರನ್ನು ಮ್ಯೂಟ್ ಮಾಡಿಸುತ್ತೇನೆ. ಅದಕ್ಕೆ ನಾಲ್ಕೈದು ದಿನ ವೇಳೆ ತಗಲುತ್ತದೆ. ಪಾತ್ರವನ್ನು ಕಿತ್ತು ಹಾಕುವ ಕುರಿತೂ ನಿರ್ದೇಶಕರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ" ಎಂದು ಭರವಸೆ ನೀಡಿದ್ದಾರೆ. (ಒನ್ ಇಂಡಿಯಾ ಕನ್ನಡ)