'ಎದ್ದೇಳು ಮಂಜುನಾಥ' ಸನತ್‌ ಕಾಲು ತೆಗೆದ ವೈದ್ಯರು

By Rajendra

Eddelu Manjunatha Producer
ನವರಸ ನಾಯಕ ಜಗ್ಗೇಶ್ ಮುಖ್ಯಭೂಮಿಕೆಯಲ್ಲಿದ್ದ 'ಎದ್ದೇಳು ಮಂಜುನಾಥ' ಚಿತ್ರದ ನಿರ್ಮಾಪಕ ಸನತ್ ಕುಮಾರ್ ಅವರು ಕೆಲದಿನಗಳ ಹಿಂದೆ ಬಿದ್ದು ಕಾಲಿಗೆ ಗಾಯ ಮಾಡಿಕೊಂಡಿದ್ದರು. ಬಳಿಕ ಅವರು ಚಿಕಿತ್ಸೆಗಾಗಿ ಬೆಂಗಳೂರಿನ ಪ್ರಿಸ್ಟೈನ್ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಹಲವಾರು ಬಾರಿ ಶಸ್ತ್ರಚಿಕಿತ್ಸೆ ಮಾಡಿದರೂ ಪ್ರಯೋಜನವಾಗಿರಲಿಲ್ಲ.

ಕಡೆಗೆ ವಿಧಿಯಿಲ್ಲದೆ ಸನತ್ ಅವರ ಎಡಗಾಲಿನ ಸ್ವಲ್ಪ ಭಾಗವನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಲಾಗಿದೆ. ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಬಿದ್ದು ಸತನ್ ಕುಮಾರ್ ಗಾಯಗೊಂಡಿದ್ದರು. ದಿವಂಗತ ಪತ್ರಕರ್ತ ಬಿ ವಿ ವೈಕುಂಠ ರಾಜು ಅವರ ಪುತ್ರ ಸನತ್ ಕುಮಾರ್. ಇನ್ನೂ ಪ್ರಿಸ್ಟೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರನ್ನು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಚಿತ್ರ ನಿರ್ಮಾಣದ ಜೊತೆಗೆ ಹಲವಾರು ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವವೂ ಅವರಿಗಿದೆ. ಸದ್ಯಕ್ಕೆ ಅವರು ಮಲಯಾಳಂನ ಚಿತ್ರವೊಂದನ್ನು ರೀಮೇಕ್ ಮಾಡುತ್ತಿದ್ದರು. ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಒನ್‌ಇಂಡಿಯಾ ಕನ್ನಡ ಹಾರೈಸುತ್ತದೆ.

More from Filmibeat

English summary
Eddelu Manjunatha Kannada film producer Sanath Kumar few days back fell down in Bangalore press club and injured. The doctors at Pristine Hospital were forced to cut off a portion of his left leg.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X