Don't Miss!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣೇಶ ಚತುರ್ಥಿಗೆ ನಟ ಗಣೇಶ್ ಸಂಕಲ್ಪ ಏನು ಗೊತ್ತೆ?
ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಬುದ್ಧಿ ಪ್ರದಾಯಕ, ಸಿದ್ಧಿ ದಾಯಕ, ಗಣಗಳ ಅಧೀಶ್ವರವಿಘ್ನೇಶ್ವರನು ಒಳ್ಳೆ ಆಲೋಚನೆಯೊಂದನ್ನು ಕೊಟ್ಟಂತಿದೆ. ಅವರು ಈ ಬಾರಿಯ ಗಣೇಶ ಚತುರ್ಥಿಗೂ ಮುನ್ನ ಹೊಸ ಸಂಕಲ್ಪವನ್ನು ತೊಟ್ಟಿದ್ದಾರೆ. ಆದರೆ ಈ ಸಂಕಲ್ಪವನ್ನು ಅವರು ಎಷ್ಟರ ಮಟ್ಟಿಗೆ ಪಾಲಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.
ಕಲಾತ್ಮಕ ಹಾಗೂ ಹೊಸ ಅಲೆಯ ಚಿತ್ರಗಳಲ್ಲಿ ನಟಿಸುವುದಾಗಿ ಗೋಲ್ಡನ್ ಸ್ಟಾರ್ ಗಣೇಶ್ ಹೇಳಿದ್ದಾರೆ. ಗಿರೀಶ್ ಕಾಸರವಳ್ಳಿ ಅವರಂತಹ ಪ್ರತಿಭಾನ್ವಿತ ನಿರ್ದೇಶಕರ ಚಿತ್ರಗಳಲ್ಲಿ ಅಭಿನಯಿಸುವುದಾಗಿ ತಮ್ಮ ಮನದಾಳದ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಸುಚಿತ್ರ ಫಿಲಂ ಸೊಸೈಟಿ ಆಯೋಜಿಸಿದ್ದ 'ಚಿತ್ರವರ್ಷ' ಕಾರ್ಯಕ್ರಮದಲ್ಲಿ ಸಭಿಕರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ರೀಮೇಕ್ ಚಿತ್ರಗಳಿಂದ ಕನ್ನಡ ಚಿತ್ರರಂಗಕ್ಕೆ ತಕ್ಕ ಮಟ್ಟಿಗೆ ಲಾಭವಾಗಿದೆ. ಆದರೆ ಕನ್ನಡ ಚಿತ್ರರಂಗಕ್ಕೆ ಡಬ್ಬಿಂಗ್ ಬೇಡ ಎಂದು ಇತ್ತೀಚೆಗಷ್ಟೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿರುವ ಬೋಳುವಾರು ಮಹಮದ್ ಕುಞ್ಞಿ ಅಭಿಪ್ರಾಯಪಟ್ಟಿದ್ದಾರೆ.
ಈ ಬಾರಿ ಚಿತ್ರಸಮೂಹ ಕೇವಲ ಕಲಾತ್ಮಕ ಚಿತ್ರಗಳಷ್ಟೇ ಅಲ್ಲದೆ ಕಮರ್ಷಿಯಲ್ ಚಿತ್ರಗಳನ್ನು ಪ್ರದರ್ಶಿಸಿದ್ದು ವಿಶೇಷ. ಮುಂಗಾರು ಮಳೆ, ಮೊಗ್ಗಿನ ಜಡೆ, ಪ್ರೀತಿ ಪ್ರೇಮ ಪ್ರಣಯ, ಹಾರು ಹಕ್ಕಿಯನೇರಿ, ನಾನು ಗಾಂಧಿ, ದುನಿಯಾ, ಸೈನೈಡ್, ನಾಯಿ ನೆರಳು, ತುತ್ತೂರಿ, ಮುಖಪುಟ ಚಿತ್ರಗಳು ಇನ್ನೂ ಪ್ರದರ್ಶನ ಕಾಣುತ್ತಿವೆ.