Don't Miss!
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವೈಕುಂಠ ಎಕ್ಸ್ ಪ್ರೆಸ್' ಹತ್ತಿದ ನವರಸ ನಾಯಕ
ನವರಸ ನಾಯಕ ಜಗ್ಗೇಶ್ ಅವರ ಮುಂದಿನ ಚಿತ್ರಕ್ಕೆ 'ವೈಕುಂಠ ಎಕ್ಸ್ ಪ್ರೆಸ್' ಎಂದು ಹೆಸರಿಡಲಾಗಿದೆ. ಈ ಚಿತ್ರದ ಮೂಲಕ ನಿರ್ದೇಶಕನಾಗಬೇಕೆಂಬ ಛಾಯಾಗ್ರಾಹಕಅಶೋಕ್ ಕಶ್ಯಪ್ ಅವರ ಕನಸು ನನಸಾಗುತ್ತಿದೆ. ನವೆಂಬರ್ 23ರಂದು 'ವೈಕುಂಠ ಎಕ್ಸ್ ಪ್ರೆಸ್' ಸೆಟ್ಟೇರುತ್ತಿರುವ ಚಿತ್ರಕ್ಕೆ ಶಂಕರ್ ರೆಡ್ಡಿ ನಿರ್ಮಾಪಕರು.
ಎರಡು ವರ್ಷಗಳ ಹಿಂದೆ ಆರಂಭವಾದ 'ಸಿಹಿ ಮುತ್ತು' ಎಂಬ ಚಿತ್ರ ಕಾರಣಾಂತರಗಳಿಂದ ನಿಂತು ಹೋಯಿತು. ನಿರ್ದೇಶಕನಾಗಬೇಕೆಂಬ ಕಶ್ಯಪ್ ಕನಸಿಗೆ 'ಸಿಹಿ ಮುತ್ತು' ಚಿತ್ರ ಕಹಿ ಮುತ್ತಾಗಿ ಪರಿಣಮಿಸಿತು. ನಿರ್ಮಾಪಕ ಶಂಕರರೆಡ್ಡಿ ಅವರದೂ ಇದೇ ಕತೆ. ಅವರ ನಿರ್ಮಾಣದ ಚೊಚ್ಚಲ ಚಿತ್ರವೂ ಕಾರಣಾಂತರಗಳಿಂದ ನಿಂತು ಹೋಗಿತ್ತು.
ರಾಜಕೀಯದಲ್ಲಿ ಬ್ಯುಸಿಯಾಗಿರುವ ಕಾರಣ ಜಗ್ಗೇಶ್ ಬಣ್ಣಬಳಿದುಕೊಳ್ಳಲು ಸಾಧ್ಯವಾಗಿರಲಿಲ್ಲ. ಇದೀಗ ಬಿಡುವು ಮಾಡಿಕೊಂಡು ವೈಕುಂಠ ಎಕ್ಸ್ ಪ್ರೆಸ್ ಚಿತ್ರದ ಮೂಲಕ ಮತ್ತೆ ನಟನೆಗೆ ಮರಳುತ್ತಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಂಜು ಮಾಂಡವ್ಯ ಸಂಭಾಷಣೆ ಇದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)