Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನಸೆಂಬ ಕುದುರೆಯನೇರಿ ವಿಶೇಷ ಪ್ರದರ್ಶನಕ್ಕೆ ಬನ್ನಿ
ಸದಭಿರುಚಿ ಚಲನಚಿತ್ರಗಳನ್ನು ಪ್ರದರ್ಶಿಸಿ, ಚಿತ್ರತಂಡದೊಡನೆ ಆರೋಗ್ಯಕರ ಸಂವಾದ ನಡೆಸಿಕೊಂಡು ಬರುತ್ತಿರುವ ಅವಿರತ ಪ್ರತಿಷ್ಠಾನವು ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ "ಕನಸೆಂಬ ಕುದುರೆಯನೇರಿ" ಚಿತ್ರದ ವಿಶೇಷ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮವನ್ನು ಕೆ.ಎಚ್ ಕಲಾಸೌಧದಲ್ಲಿ ಏರ್ಪಡಿಸಿದೆ.
ಅವಿರತ ಹಾಗೂ ವಿಪ್ರೊ ಕನ್ನಡ ಬಳಗದ ಸಹಯೋಗದೊಂದಿಗೆ ನಡೆಯುತ್ತಿರುವ ಈ ಚಿತ್ರ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಗಿರೀಶ್ ಕಾಸರವಳ್ಳಿ, ವೈಜನಾಥ ಬಿರಾದರ, ಪವಿತ್ರ ಲೋಕೇಶ್, ಸದಾಶಿವ ಬ್ರಹ್ಮಾವರ್ ಮತ್ತಿತ್ತರರು ಪಾಲ್ಗೊಳ್ಳಲಿದ್ದಾರೆ. 2010ನೇ ಸಾಲಿನ ರೋಮ್ ನ ಏಷ್ಯಾಲಿಕಾ ಚಿತ್ರೋತ್ಸವ, ಶ್ರೇಷ್ಠ ಏಷ್ಯನ್ ಚಿತ್ರ NETPAC ಅವಾರ್ಡ್ ಈ ಚಿತ್ರಕ್ಕೆ ಸಂದಿದೆ.
ಸ್ಥಳ:
ಕೆ.ಎಚ್
ಕಲಾಸೌಧ,
ರಾಮಾಂಜನೇಯ
ಗುಡ್ಡ,
ಹನುಮಂತನಗರ,
ಬೆಂಗಳೂರು
ದಿನಾಂಕ/ದಿನ:
ಮಾರ್ಚ್
13,
ಭಾನುವಾರ
ಸಮಯ:
ಮಧ್ಯಾಹ್ನ
3.30ಕ್ಕೆ
ಟಿಕೆಟ್
ಬೆಲೆ
:
100
ರು.
ಸಂಪರ್ಕಿಸಿ:
98800
86300
ಅವಿರತ ತಂಡದ 40ನೇ ಚಿತ್ರ ಪ್ರದರ್ಶನ ಇದಾಗಿದ್ದು, ವಿಜಯ್ ಹನಕೆರೆ ಅವರು ಸಂವಾದ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಈ ವಿಶೇಷ ಪ್ರದರ್ಶನಕ್ಕೆ ಐ.ಟಿ. ಕನ್ನಡಿಗರ ಕೂಟ, ಬೆಂಗಳೂರು ಎಕ್ಸ್ ಪೊ, ವಟಿ ಕುಟೀರ ಮುಂತಾದ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿದೆ.
'ಕನಸೆಂಬ ಕುದುರೆಯನೇರಿ' ಅಮರೇಶ ನುಗಡೋಣಿ ಅವರ 'ಸವಾರಿ' ಸಣ್ಣಕಥೆಯನ್ನಾಧರಿಸಿದ ಚಿತ್ರ. 57ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪ್ರಾದೇಶಿಕ ಚಿತ್ರ ವಿಭಾಗದಲ್ಲಿ 'ಕನಸೆಂಬ ಕುದುರೆಯನೇರಿ' ಚಿತ್ರ ರಜತ ಕಮಲ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಬಸಂತ್ ಕುಮಾರ್ ಪಾಟೀಲ ನಿರ್ಮಾಣದ ಈ ಚಿತ್ರದಲ್ಲಿ ವೈಜಯಂತ್ ಬಿರಾದರ್ ಹಾಗೂ ಉಮಾಶ್ರೀ ಮುಖ್ಯಭೂಮಿಕೆಯಲ್ಲಿದ್ದಾರೆ.