Don't Miss!
- News Namma Metro: 2023-24ರಲ್ಲಿ ಮೆಟ್ರೋ ವಾರ್ಷಿಕ ಆದಾಯದಲ್ಲಿ ಭಾರೀ ಏರಿಕೆ: ಖರ್ಚು-ಆದಾಯದ ಮಾಹಿತಿ?
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಪ್ಪತ್ತೈದರ ಯೌವನದಲ್ಲಿ ಕನ್ನಡ ಚಿತ್ರರಂಗ
ಅಮೃತ ಮಹೋತ್ಸವದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಸಿದ್ಧತೆಗಾಗಿ, ರಂಗ ತಾಲೀಮು ಮಾಡಿಕೊಳ್ಳಲು, ಕನ್ನಡ ಚಿತ್ರರಂಗದ ಪ್ರತಿಯೊಬ್ಬರೂ ಭಾಗವಹಿಸಬೇಕೆಂಬ ಸದುದ್ದೇಶದಿಂದ ಇಡೀ ಕನ್ನಡ ಚಿತ್ರೋದ್ಯಮಕ್ಕೆ ಫೆಬ್ರವರಿ 17ರಿಂದ 15 ದಿನಗಳ ಕಾಲ ರಜೆ ಘೋಷಿಸಲಾಗಿದೆ. ಮೂರು ದಿನಗಳ ಕಾಲ ಕಾರ್ಯಕ್ರಮ ಸುಸೂತ್ರವಾಗಿ ನಿರ್ವಹಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ವತಿಯಿಂದ ಕಾರ್ಯಕ್ರಮಕ್ಕೆ ಶೋಭೆ ನೀಡಲಿದ್ದಾರೆ.
ಹಣಕಾಸು ಸಮಿತಿಯ ಅಧ್ಯಕ್ಷೆಯಾಗಿ ಪಾರ್ವತಮ್ಮ ರಾಜ್ ಕುಮಾರ್, ಸಾಂಸ್ಕೃತಿಕ ಕಾರ್ಯಕ್ರಮದ ನಿರ್ದೇಶಕರಾಗಿ ಕ್ರೇಜಿ ಸ್ಟಾರ್ ವಿ.ರವಿಚಂದ್ರನ್, ಅಮೃತ ಮಹೋತ್ಸವ ಪುಸ್ತಕ ಸರಣಿಯ ಪ್ರಧಾನ ಸಂಪಾದಕರಾಗಿ ಡಾ.ಬರಗೂರು ರಾಮಚಂದ್ರಪ್ಪ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸದಭಿರುಚಿಯ ಕನ್ನಡ ಚಿತ್ರಗಳನ್ನು ಪ್ರದರ್ಶಿಸಲು ಟಿ.ಎಸ್.ನಾಗಾಭರಣ ಮತ್ತು ''ಕನ್ನಡ ಚಿತ್ರರಂಗ ನೆನ್ನೆ, ಇಂದು ಮತ್ತು ನಾಳೆ'' ವಿಚಾರ ಸಂಕಿರಣದ ನೇತೃತ್ವವನ್ನು ನಾಗತಿಹಳ್ಳಿ ಚಂದ್ರಶೇಖರ್ ವಹಿಸಲಿದ್ದಾರೆ.
ಮಾರ್ಚ್ 1 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಂಸ್ಕೃತಿಕ ಹಬ್ಬದೊಂದಿಗೆ ಬೆಳಗ್ಗೆ 7 ಗಂಟೆಗೆ ಕಾರ್ಯಕ್ರಮ ಚಾಲನೆ ಪಡೆದುಕೊಳ್ಳಲಿದೆ. ಆಗಿಹೋದ ಕನ್ನಡ ಚಿತ್ರರಂಗದ ಮಹಾನುಭಾವರುಗಳ 75 ಪುಸ್ತಕಗಳ ಲೋಕಾರ್ಪಣೆಯಾಗಲಿವೆ. ಕನ್ನಡ ಚಿತ್ರೋದ್ಯಮದ 108 ಮಂದಿ ಗಣ್ಯರಿಗೆ ಸನ್ಮಾನಿಸಲಾಗುತ್ತದೆ. ಕರ್ನಾಟಕದಲ್ಲಿ ಹುಟ್ಟಿ, ಕನ್ನಡ ಚಿತ್ರಗಳಲ್ಲಿ ನಟಿಸಿ ಈಗ ಅನ್ಯ ಭಾಷೆಗಳಲ್ಲಿ ನಟಿಸುತ್ತಿರುವ ಕಲಾವಿದರನ್ನು ಮಾರ್ಚ್ 3ರಂದು ಸನ್ಮಾನಿಸಲಾಗುತ್ತದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಜಯಮಾಲಾ ವಿವರ ನೀಡಿದರು.
ಅಮೃತ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಸಕ್ತಿದಾಯಕವಾಗಿ ರೂಪಿಸಲು, ಕನ್ನಡ ಚಿತ್ರರಂಗದ ಆಗಿ ಹೋದ ಮಹಾನುಭಾವರನ್ನು ನೆನಪಿಸುವಂತೆ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ ವಿ.ರವಿಚಂದ್ರನ್. ಈ ಸಾಂಸ್ಕೃತಿಕ ಹಬ್ಬ ಒಟ್ಟು ನಾಲ್ಕು ಗಂಟೆಗಳ ಕಾಲ ನಡೆಯಲಿದ್ದು 11 ಗಂಟೆಗೆ ಕೊನೆಯಾಗಲಿದೆ ಎಂದು ರವಿಚಂದ್ರನ್ ತಿಳಿಸಿದರು. ಡಾ.ಬಿ.ಸರೋಜಾದೆವಿ, ಡಾ.ಶ್ರೀನಾಥ್, ಪಾರ್ವತಮ್ಮ ರಾಜ್ ಕುಮಾರ್, ಉದಯ ವಾಹಿನಿಯ ಮುಖ್ಯ ನಿರ್ವಹಣಾಧಿಕಾರಿ ವಿಜಯ ಕುಮಾರ್, ಸನ್ ಫೀಸ್ಟ್ ಐಟಿಸಿ ಫುಡ್ಸ್ ನ ಮಾರುಕಟ್ಟೆ ಮುಖ್ಯಸ್ಥ ವಿ.ಎಲ್.ರಾಜೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ಪೂರಕ
ಓದಿಗೆ
ಕನ್ನಡ
ಸಿನಿಮಾ
75ಕ್ಕೆ
75ಪುಸ್ತಕ:
ಜಯಮಾಲಾ
ಕನ್ನಡ
ಚಿತ್ರರಂಗಕ್ಕೆ
15
ದಿನಗಳ
ರಜೆ
ಬೇಕೆ?