Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರು ಸುತ್ತಮುತ್ತ ಕರಿ ಚಿರತೆ ಹಾವಳಿ
ಗಜ ನಿರ್ದೇಶಕ ಮಾದೇಶ್ ಅವರು ಈಗ ಚಿರತೆಯ ಬೇಟೆಯಲ್ಲಿ ನಿರತರಾಗಿದ್ದಾರೆ. ಮಾದೇಶ್ ನಿರ್ದೇಶನದಲ್ಲಿ ವಿಜಯ್ ನಾಯಕನಾಗಿ ನಟಿಸುತ್ತಿರುವ 'ಕರಿಚಿರತೆ' ಚಿತ್ರಕ್ಕೆ ಮೈಸೂರು ಸುತ್ತ ಮುತ್ತ 25 ದಿನಗಳ ಕಾಲ ಎರಡು ಹಾಡು ಎರಡು ಫೈಟ್ಸ್ ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆಸಿಕೊಂಡು ಬಂದಿದ್ದು ಡಿಸೆಂಬರ್ನಲ್ಲಿ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ನಿರ್ಮಾಪಕರಲ್ಲೊಬ್ಬರಾದ ಮೋಹನ್ ತಿಳಿಸಿದ್ದಾರೆ.
ಹಿಂದೆ ಪ್ರೀತ್ಸೆ ಪ್ರೀತ್ಸೆ ಚಿತ್ರ ನಿರ್ಮಿಸಿದ್ದ ಕೃಷ್ಣಯ್ಯ ಹಾಗೂ ಮೋಹನ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ನಾಯಕ ವಿಜಯ್ ಈ ಚಿತ್ರದಲ್ಲಿ ಗ್ಯಾರೇಜ್ ಒಂದರ ಮಾಲೀಕನಾಗಿದ್ದು ಸುಧಾ ಬೆಳವಾಡಿ ತಾಯಿ ಪಾತ್ರ ನಿರ್ವಹಿಸಿದ್ದಾರೆ. ಮೈಸೂರು ಸುತ್ತಮುತ್ತ ಅರಮನೆ, ಇಲವಾಲ, ನಂಜನಗೂಡು, ಕಳಲೆ ದೇವಸ್ಥಾನ, ಮಾದೇಶ್ವರ ಬೆಟ್ಟ ಮುಂತಾದ ಕಡೆಗಳಲ್ಲಿ ನಿರಂತರ ಚಿತ್ರೀಕರಣ ನಡೆದಿದೆ.
ಈಗಾಗಲೇ ಶೇಕಡ 50 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು ಸಾಧುಕೋಕಿಲರ ಸಂಗೀತ ಸಂಯೋಜನೆ ಮಾಸ್ಮಾದರ ಸಾಹಸ ಸಂಯೋಜನೆ ಇದ್ದು ಶರ್ಮಿಳಾ ಮಾಂಡ್ರೆ, ಯಜ್ಞ ಶೆಟ್ಟಿ, ಜೈಜಗದೀಶ್, ಸಂಗೀತ ಉಳಿದ ತಾರಾಗಣದಲ್ಲಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)