Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿನವ ಚಕ್ರವರ್ತಿ ಬಿರುದು ಪಡೆಯಲಿರುವ ಸುದೀಪ್
ಕಿಚ್ಚ ಸುದೀಪ್ ಅವರಿಗೆ 'ಅಭಿನವ ಚಕ್ರವರ್ತಿ' ಎಂಬ ಹೊಸ ಬಿರುದು ದೊರೆಯಲಿದೆ. ಕರ್ನಾಟಕ ರಕ್ಷಣಾ ವೇದಿಕೆ ಸದಯದಲ್ಲಿಯೇ ಬೆಂಗಳೂರಿನಲ್ಲಿ ಬೃಹತ್ ಸಮಾರಂಭವೊಂದನ್ನು ಆಯೋಜಿಸಿ ಈ ಬಿರುದು ನೀಡಲಿದೆ. ನಿನ್ನೆ (ಜನವರಿ 8, 2012) ಕರ್ನಾಟಕ ರಕ್ಷಣಾ ವೇದಿಕೆ, ಬಾಪೂಜಿನಗರ ಘಟಕದ 'ಸಂಕ್ರಾಂತಿ ಸುಗ್ಗಿ' ಕಾರ್ಯಕ್ರಮದಲ್ಲಿ ಕರವೇ ವತಿಯಿಂದ ರಾಜ್ಯಾಧ್ಯಕ್ಷ ನಾರಾಯಣ ಗೌಡ ಸುದೀಪ್ ಅವರನ್ನು ಸನ್ಮಾನಿಸಿದ ನಂತರ ಈ ವಿಷಯವನ್ನು ಬಹಿರಂಗಗೊಳಿಸಿದರು.
ಸಮಾರಂಭದಲ್ಲಿ ಮಾತನಾಡಿದ ನಟ ಸುದೀಪ್, "ಕನ್ನಡ ಚಿತ್ರರಂಗದಲ್ಲಿ ಪ್ರೇಕ್ಷಕರು ನನ್ನನ್ನು ದೊಡ್ಡ ಮಟ್ಟದಲ್ಲಿ ಬೆಳೆಸಿದ್ದಾರೆ. ಕನ್ನಡಿಗನಾಗಿ ಕನ್ನಡಕ್ಕಾಗಿ ದುಡಿಯುತ್ತಿದ್ದೇನೆ ಎನ್ನುವ ಆತ್ಮಾಭಿಮಾನ ನನ್ನಲ್ಲಿದೆ. ನಮ್ಮತನವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಾವು ತೊಡಗಿಕೊಳ್ಳಬೇಕು. ಕರವೇಯೊಂದಿಗೆ ಕೈ ಜೋಡಿಸಿದರೆ ಇದು ಸಾಧ್ಯ" ಎಂದರು.
ಬೇರೆ ಭಾಷೆಯಲ್ಲಿ ನಟಿಸುವ ಅವಕಾಶ ಬಂದಾಗ ಅದನ್ನು ಸಮರ್ಪಕವಾಗಿ ನಿಭಾಯಿಸಿದ್ದೇನೆ. ಹಾಗೇ, ನನ್ನ ನಟನೆ ಮೆಚ್ಚಿ ಕನ್ನಡಿದರು ನೀಡಿ ಉನ್ನತ ಸ್ಥಾನವನ್ನು ಮರೆತಿಲ್ಲ. ಜೀವನದ ಕೊನೆಯವೆರೆಗೂ ಕನ್ನಡ ಚಿತ್ರರಣಗದಲ್ಲಿಯೇ ಉಳಿಯುವುದಾಗಿ ಸುದೀಪ್ ಘೋಷಿಸಿದರು. ಒಟ್ಟಿನಲ್ಲಿ ಕಿಚ್ಚ ಸುದೀಪ್ ಇನ್ನು ಮುಂದೆ 'ಅಭಿನವ ಚಕ್ರವರ್ತಿ' ಎನಿಸಿಕೊಳ್ಳಲಿದ್ದಾರೆ. (ಒನ್ ಇಂಡಿಯಾ ಕನ್ನಡ)