Don't Miss!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಂಜಿತಾ ಪಾತ್ರ ಮಾಡ್ತಾರಂತೆ ದುಂಡು ಮಲ್ಲಿಗೆ ನಮಿತಾ!
ಸ್ವಾಮಿ ನಿತ್ಯಾನಂದ ಕುರಿತ ವಿವಾದಾತ್ಮಕ ಚಿತ್ರವನ್ನು ಮದನ್ ಪಟೇಲ್ ಕೈಗೆತ್ತಿಕೊಂಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಚಿತ್ರಕ್ಕೆ ಅವರು 'ಸತ್ಯಾನಂದ' ಎಂದು ಹೆಸರಿಟ್ಟಿದ್ದಾರೆ. ಸ್ವಾಮಿ ನಿತ್ಯಾನಂದ ನೈಜಕತೆ ಎಂದ ಮೇಲೆ ರಂಜಿತಾ ಇರದಿದ್ದರೆ ಹೇಗೆ. ಈ ಪಾತ್ರಕ್ಕಾಗಿ ಸ್ವತಃ ರಂಜಿತಾ ಅವರನ್ನೇ ಮದನ್ ಸಂಪರ್ಕಿಸಲು ಪ್ರಯತ್ನಿಸಿ ವಿಫಲರಾಗಿದ್ದರು.
ಕಡೆಗೆ ರಂಜಿತಾ ಪಾತ್ರವನ್ನು ಪೋಷಿಸಲು ಸೆಕ್ಸಿ ತಾರೆ ನಮಿತಾರನ್ನು ಆಹ್ವಾನಿಸಿದ್ದಾರೆ. ಆದರೆ ನಮಿತಾ ಈ ಪಾತ್ರಕ್ಕೆ ಜೀವ ತುಂಬಲು ಊ ಅಂದಿದ್ದಾರೋ ಊಹುಂ ಅಂದಿದ್ದಾರೋ ತಿಳಿದುಬಂದಿಲ್ಲ. ಒಟ್ಟಿನಲ್ಲಿ ಆಕೆಯನ್ನು ಕರೆತರುವ ಎಲ್ಲ ಸಿದ್ಧತೆಗಳನ್ನು ಮದನ್ ಮಾಡುತ್ತಿದ್ದಾರೆ. ನಮಿತಾ ಸಿಗದಿದ್ದರೆ ಚಾರ್ಮಿ ಕೌರ್ ಅವರನ್ನು ಕರೆತರುವುದಾಗಿ ಮದನ್ ಹೇಳಿದ್ದಾರೆ.ಆದರೆ ಇನ್ನೂ ಯಾರು ಎಂಬುದು ಕನ್ಫರ್ಮ್ ಆಗಿಲ್ಲ.
ಅಂದಹಾಗೆ ನಿತ್ಯಾನಂದನ ಪಾತ್ರವನ್ನು ರವಿ ಚೇತನ್ ಎಂಬುವವರು ಪೋಷಿಸುತ್ತಿದ್ದಾರೆ. ಸದ್ಯಕ್ಕೆ ಈ ಚಿತ್ರದ ಚಿತ್ರೀಕರಣ ಮಹಾರಾಣಿ ಕಾಲೇಜು ಮುಂದಿನ ಫ್ರೀಡಂ ಪಾರ್ಕಿನಲ್ಲಿ ಭರದಿಂದ ಸಾಗಿದೆ. 'ಕೋಟಿಗೊಬ್ಬ' ಚಿತ್ರದ ಮೂಲಕ ರವಿ ಚೇತನ್ ಬೆಳ್ಳಿತೆರೆಗೆ ಅಡಿಯಿಟ್ಟಿದ್ದರು. ಬಳಿಕ ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದರು. ಇದೊಂದು ಚತುರ್ಭಾಷಾ ಚಿತ್ರ ಎನ್ನುತ್ತಾರೆ ಮದನ್.