Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಂಜಿತಾ ಪಾತ್ರ ಮಾಡ್ತಾರಂತೆ ದುಂಡು ಮಲ್ಲಿಗೆ ನಮಿತಾ!
ಸ್ವಾಮಿ ನಿತ್ಯಾನಂದ ಕುರಿತ ವಿವಾದಾತ್ಮಕ ಚಿತ್ರವನ್ನು ಮದನ್ ಪಟೇಲ್ ಕೈಗೆತ್ತಿಕೊಂಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಚಿತ್ರಕ್ಕೆ ಅವರು 'ಸತ್ಯಾನಂದ' ಎಂದು ಹೆಸರಿಟ್ಟಿದ್ದಾರೆ. ಸ್ವಾಮಿ ನಿತ್ಯಾನಂದ ನೈಜಕತೆ ಎಂದ ಮೇಲೆ ರಂಜಿತಾ ಇರದಿದ್ದರೆ ಹೇಗೆ. ಈ ಪಾತ್ರಕ್ಕಾಗಿ ಸ್ವತಃ ರಂಜಿತಾ ಅವರನ್ನೇ ಮದನ್ ಸಂಪರ್ಕಿಸಲು ಪ್ರಯತ್ನಿಸಿ ವಿಫಲರಾಗಿದ್ದರು.
ಕಡೆಗೆ ರಂಜಿತಾ ಪಾತ್ರವನ್ನು ಪೋಷಿಸಲು ಸೆಕ್ಸಿ ತಾರೆ ನಮಿತಾರನ್ನು ಆಹ್ವಾನಿಸಿದ್ದಾರೆ. ಆದರೆ ನಮಿತಾ ಈ ಪಾತ್ರಕ್ಕೆ ಜೀವ ತುಂಬಲು ಊ ಅಂದಿದ್ದಾರೋ ಊಹುಂ ಅಂದಿದ್ದಾರೋ ತಿಳಿದುಬಂದಿಲ್ಲ. ಒಟ್ಟಿನಲ್ಲಿ ಆಕೆಯನ್ನು ಕರೆತರುವ ಎಲ್ಲ ಸಿದ್ಧತೆಗಳನ್ನು ಮದನ್ ಮಾಡುತ್ತಿದ್ದಾರೆ. ನಮಿತಾ ಸಿಗದಿದ್ದರೆ ಚಾರ್ಮಿ ಕೌರ್ ಅವರನ್ನು ಕರೆತರುವುದಾಗಿ ಮದನ್ ಹೇಳಿದ್ದಾರೆ.ಆದರೆ ಇನ್ನೂ ಯಾರು ಎಂಬುದು ಕನ್ಫರ್ಮ್ ಆಗಿಲ್ಲ.
ಅಂದಹಾಗೆ ನಿತ್ಯಾನಂದನ ಪಾತ್ರವನ್ನು ರವಿ ಚೇತನ್ ಎಂಬುವವರು ಪೋಷಿಸುತ್ತಿದ್ದಾರೆ. ಸದ್ಯಕ್ಕೆ ಈ ಚಿತ್ರದ ಚಿತ್ರೀಕರಣ ಮಹಾರಾಣಿ ಕಾಲೇಜು ಮುಂದಿನ ಫ್ರೀಡಂ ಪಾರ್ಕಿನಲ್ಲಿ ಭರದಿಂದ ಸಾಗಿದೆ. 'ಕೋಟಿಗೊಬ್ಬ' ಚಿತ್ರದ ಮೂಲಕ ರವಿ ಚೇತನ್ ಬೆಳ್ಳಿತೆರೆಗೆ ಅಡಿಯಿಟ್ಟಿದ್ದರು. ಬಳಿಕ ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದರು. ಇದೊಂದು ಚತುರ್ಭಾಷಾ ಚಿತ್ರ ಎನ್ನುತ್ತಾರೆ ಮದನ್.