Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗತಿಹಳ್ಳಿ ಒಲವೇ ಜೀವನ ಲೆಕ್ಕಾಚಾರ ಸಾಕ್ಷಾತ್ಕಾರ!
ಸೂಕ್ಷ್ಮವಾಗಿರುವ ಈ ಕತೆಯನ್ನು ತೆರೆಗೆ ತರಬೇಕಾದರೆ ಸಾಕಷ್ಟು ಜಾಗ್ರತೆಯನ್ನು ತೆಗೆದುಕೊಂಡಿದ್ದೇನೆ. ಕತೆ ಓದುವುದಕ್ಕಿಂತಲೂ ದೃಶ್ಯ ಮಾಧ್ಯಮ ತುಂಬಾ ಪ್ರಭಾವಶಾಲಿಯಾದದ್ದು. ಬೆಳ್ಳಿತೆರೆಗೆ ಈ ಕತೆಯನ್ನು ಅಳವಡಿಸಿಕೊಳ್ಳಲು ಎಲ್ಲಾ ಎಚ್ಚರಿಕೆಗಳನ್ನು ತೆಗೆದುಕೊಂಡಿದ್ದೇನೆ. ಕೊನೆಗೆ ಚಿತ್ರವನ್ನು ನೋಡಿದಾಗ ನಿಜಕ್ಕೂ ತೃಪ್ತಿಯಾಯಿತು ಎಂದು ತಮ್ಮ ಚಿತ್ರದ ಬಗ್ಗೆ ವಿವರ ನೀಡಿದ್ದಾರೆ.
ಹಾಗಂತ ಒಲವೇ ಜೀವನ ಲೆಕ್ಕಾಚಾರ ಗಂಭೀರ ಸ್ವಭಾವದ್ದಲ್ಲ. ಒಟ್ಟಾರೆ ಸನ್ನಿವೇಶಗಳನ್ನು ವಿಡಂಬನಾತ್ಮಕವಾಗಿ ತೋರಿಸಲು ಪ್ರಯತ್ನಿಸಿದ್ದೇನೆ. ಆರ್ ಎಸ್ ಎಸ್ ಅಥವಾ ನಕ್ಸಲ್ ಸಂಘಟನೆಗಳ ಹಿಂದಿರುವ ತತ್ವಗಳನ್ನು ಅರ್ಥಮಾಡಿಕೊಳ್ಳದೆ ಯುವಕರು ಸೇರ್ಪಡೆಯಾಗುತ್ತಿರುವುದನ್ನು ನಾವಿಂದು ನೋಡುತ್ತಿದ್ದೇವೆ. ನಂತರ ಅವರಿಗೆ ಸತ್ಯ ಅರಿವಾಗಿ ಅಲ್ಲಿಂದ ಹೊರಬರಲು ಪ್ರಯತ್ನಿಸುತ್ತಾರೆ. ಆದರೆ ಸಾಧ್ಯವಾಗುವುದಿಲ್ಲ.
ಈ ಹಿನ್ನೆಲೆಯಲ್ಲಿ ನನ್ನ ಚಿತ್ರ ಯಾವುದೇ ಸಿದ್ಧಾಂತ ಅಥವಾ ನಾಯಕತ್ವ ಶ್ರೇಷ್ಠವಲ್ಲ ಎಂಬುದನ್ನು ಯುವಕರಿಗೆ ಮನದಟ್ಟು ಮಾಡಲು ಪ್ರಯತ್ನಿಸುತ್ತದೆ ಎನ್ನುತ್ತಾರೆ ನಾಗತಿಹಳ್ಳಿ. ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ರಾಧಿಕಾ ಪಂಡಿತ್, ಡೈಸಿ ಬೋಪಣ್ಣ ಮತ್ತು ರಂಗಾಯಣ ರಘು ಲೆಕ್ಕಾಚಾರದ ನಟನೆ ಜೊತೆಗಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)