Don't Miss!
- Automobiles Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೋಗಿಗಳಲ್ಲಿ ಹೊಸ ಚೈತನ್ಯ ತುಂಬಿದ ರಜನಿಕಾಂತ್
ಅನಾರೋಗ್ಯದಿಂದ ಬಳಲುತ್ತಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಈಗಷ್ಟೆ ಸೇಂಟ್ ಇಸಬೆಲ್ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ. ಬಳಿಕ ಅವರು ಆಸ್ಪತ್ರೆಯಲ್ಲಿದ್ದ ಇತರೆ ರೋಗಿಗಳ ಕ್ಷೇಮ ಸಮಾಚಾರವನ್ನು ವಿಚಾರಿಸಿದ್ದಾಗಿ ವೈದ್ಯರು ತಿಳಿಸಿದ್ದಾರೆ. ರಜನಿಯನ್ನು ಕಂಡ ರೋಗಿಗಳ ಮುಖದಲ್ಲೂ ಹೊಸ ಚೈತನ್ಯ ಕಂಡುಬಂದಿದೆಯಂತೆ.
ಆಸ್ಪತ್ರೆಯಲ್ಲಿ ತೀರಾ ಬಳಲುತ್ತಿದ್ದ ರೋಗಿಗಳು ರಜನಿಯನ್ನು ಮಾತುಗಳನ್ನು ಕೇಳಿ ಹೊಸ ಹುರುಪು, ಹುಮ್ಮಸ್ಸಿನಿಂದ ಕುಣಿದಾಡಿದರಂತೆ. "ರಜನಿ ಆರೋಗ್ಯ ಸದೃಢವಾಗಿದೆ. ಬೇರೆಯವರ ಆರೋಗ್ಯದ ಬಗ್ಗೆ ಅವರು ವಹಿಸಿದ ಕಾಳಜಿ ನಿಜಕ್ಕೂ ಅಭಿನಂದನಾರ್ಹ" ಎಂದಿದ್ದಾರೆ ಆಸ್ಪತ್ರೆ ವೈದ್ಯರು. ರಜನಿ ಕಳೆದ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದರು.
ಏಪ್ರಿಲ್ 29ರಂದು ಅವರ ಹೊಸ ಚಿತ್ರ 'ರಣ' ಆರಂಭವಾದ ದಿನವೇ ರಜನಿ ಆರೋಗ್ಯ ಕೈಕೊಟ್ಟಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇನ್ನೇನು ಚಿತ್ರೀಕರಣ ಆರಂಭಿಸಬೇಕು ಅನ್ನುವಷ್ಟರಲ್ಲಿ ಮತ್ತೆ ಅನಾರೋಗ್ಯಕ್ಕೆ ತುತ್ತಾದರು. ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದು, ಆಸ್ಪತ್ರೆಯಿಂದ ಶೀಘ್ರದಲ್ಲೆ ಬಿಡುಗಡೆಯಾಗಲಿದ್ದಾರೆ ಎನ್ನುತ್ತವೆ ಮೂಲಗಳು.